ದೇವಸ್ಥಾನಕ್ಕೆಂದು ತೆರಳಿದ ಮಹಿಳೆ ಕಾಡಿನಲ್ಲಿ ನೇಣಿಗೆ ಶರಣು!

Share with

ಸುಳ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ಬಂದ ಮಹಿಳೆಯೊಬ್ಬರು ಸಮೀಪದ ಕಾಡಿಗೆ ತೆರಳಿದ್ದು ದೇವರಗದ್ದೆ ಬಳಿ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ.

ದೇವಸ್ಥಾನಕ್ಕೆ ತೆರಳಿದ ಮಹಿಳೆ ಆತ್ಮಹತ್ಯೆ

ಮೂಲತಃ ಬೆಂಗಳೂರಿನ ನೆಲಮಂಗಲ ಮೂಲದ ಗಂಗ ಲಕ್ಷ್ಮಮ್ಮ(60ವ) ಎಂದು ತಿಳಿದು ಬಂದಿದೆ. ಸುಬ್ರಹ್ಮಣ್ಯ ದೇವರ ಗದ್ದೆಯ ಕಾಡಿನಲ್ಲಿ 2-3 ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಸುಬ್ರಹ್ಮಣ್ಯ ಪೊಲೀಸರು ಜೂ.6 ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.


Share with

Leave a Reply

Your email address will not be published. Required fields are marked *