ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ 6ನೇ ವರ್ಷದ ಆರಾಧನೆ

Share with

ಶ್ರೀಶಿರೂರುಮಠದ ಕೀರ್ತಿಶೇಷ ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ 6ನೇ ವರ್ಷದ ಆರಾಧನಾ ಮಹೋತ್ಸವವು ಉಡುಪಿ ಶ್ರೀರಾಘವೇಂದ್ರ ಮಠದ ಸನ್ನಿಧಾನದಲ್ಲಿ ಬಹು ವೈಭವದಿಂದ ಜರಗಿತು.
ಶ್ರೀಲಕ್ಷ್ಮೀವರತೀರ್ಥರ ಪೂರ್ವಾಶ್ರಮದ ಕುಟುಂಬಿಕರಿಂದ ಈ ಸಮಾರಂಭವು ಶಾಸ್ತ್ರೋಕ್ತವಾಗಿ ಆಯೋಜನೆಗೊಂಡಿತ್ತು.

ಪ್ರಾತಃಕಾಲದಲ್ಲಿ ಶ್ರೀರಾಘವೇಂದ್ರ ಗುರುಸಾರ್ವಭೌಮರ ಸಮ್ಮುಖದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಪವಮಾನ ಕಲಶಾಭಿಷೇಕ ಹೋಮ ಹಾಗೂ ವಿರಜಾ ಹೋಮವನ್ನು ವೇದಮೂರ್ತಿ ನಟರಾಜ ಉಪಾಧ್ಯಾಯ ಹಾಗೂ ವೇದಮೂರ್ತಿ ಗಣೇಶ ನಡೆಸಿಕೊಟ್ಟರು.ತದನಂತರ ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ ಮೃತ್ತಿಕಾ ವೃಂದಾವನಕ್ಕೆ ಪಂಚಾಮೃತಾಭಿಷೇಕ ಹಾಗೂ ವಿಶೇಷ ಪೂಜೆಯನ್ನು ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ಪಿ.ಲಾತವ್ಯಆಚಾರ್ಯರು ನೆರವೇರಿಸಿದರು. ಅಪರಾಹ್ನ ಅನ್ನಸಂತರ್ಪಣೆ ಜರಗಿತು.

ಈ ಶುಭಸಂದರ್ಭದಲ್ಲಿ ಶ್ರೀರಾಯರಮಠದ ಜಯತೀರ್ಥ ಆಚಾರ್ಯ, ಅಪ್ಪಣ್ಣಆಚಾರ್ಯ,ಸೊಂಡೂರುಪ್ರಹ್ಲಾದಆಚಾರ್ಯ,
ಪಿ.ವೃಜನಾಥ ಆಚಾರ್ಯ, ರಘುರಾಮಕೃಷ್ಣ ಬಲ್ಲಾಳ್ ಚಿಟಪಾಡಿ, ಸಾಯಿರಾಧಾ ಸಂಸ್ಥೆಯ ಮನೋಹರ ಶೆಟ್ಟಿ,  ವಿಕಾಸ ಶೆಟ್ಟಿ ವಳಕಾಡ್,ಚೆನ್ನೈನ  ರಾಜಗೋಪಾಲ್,ಶ್ರೀಪಾದರ ಪೂರ್ವಾಶ್ರಮದ ಸಹೋದರರು,ಶ್ರೀನಾಗೇಶ ವಿ.ಆಚಾರ್ಯ ಸುರತ್ಕಲ್, ಅಕ್ಷೋಭ್ಯ ಆಚಾರ್ಯ, ಅವನೀಶ ಬಲ್ಲಾಳ್ ಚಿಟಪಾಡಿ, ವಿಶಾಲ ಆಚಾರ್ಯ, ಶಂಕರನಾರಾಯಣ ಹೊಳ್ಳ ಕುಂದಾಪುರ ಹಾಗೂ ಇನ್ನೂ ಅನೇಕ ಮಹನೀಯರು ಶ್ರೀಪಾದರ ಆರಾಧನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕೇಮಾರು ಶ್ರೀಸಾಂದೀಪನಿ ಮಠದ ಆಶ್ರಮದಲ್ಲಿ ಶ್ರೀಈಶವಿಠಲದಾಸ ಸ್ವಾಮೀಜಿಯವರು ಶಿರೂರು ಶ್ರೀಪಾದರ ಆರಾಧನಾ ನಿಮಿತ್ತ ವಿಶೇಷ ಪೂಜೆ ಹಾಗೂ ಪುಷ್ಪಾರ್ಚನೆಯನ್ನು ಆಯೋಜಿಸಿದ್ದರು.


Share with

Leave a Reply

Your email address will not be published. Required fields are marked *