ಅಯೋಧ್ಯೆ: ಭವ್ಯ ಮಂದಿರದಲ್ಲಿ ದಿವ್ಯ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಅತ್ಯಂತ ಸಾಂಗವಾಗಿ ಯಶಸ್ವಿಯಾಗಿ ನೆರವೇರಿದೆ.

Share with

ಪ್ರಧಾನಿ ನರೇಂದ್ರ ಮೋದಿ ಅವರು ಧಾರ್ಮಿಕ ವಿಧಿ ವಿಧಾನಗಳ ಮೂಲಕ ಇಂದು ಮಧ್ಯಾಹ್ನ 12:29:03ರಿಂದ 12.30:35 ರವರೆಗೆ ಅಭಿಜಿತ್ ಶುಭ ಮುಹೂರ್ತದಲ್ಲಿ ಅಯೋಧ್ಯೆಯ ರಾಮಮಂದಿರದಲ್ಲಿ ಬಾಲ ರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯನ್ನು ನೆರವೇರಿಸಿದರು. ‘ಆರತಿ’ ವೇಳೆ ಅಯೋಧ್ಯೆಯ ಮೇಲೆ ಸೇನಾ ಹೆಲಿಕಾಪ್ಟರ್‌ಗಳಿಂದ ಪುಷ್ಪವೃಷ್ಟಿ ಸುರಿಸಲಾಯಿತು. ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ಆರತಿ ಸಮಯದಲ್ಲಿ ಕಲಾವಿದರು ದೇವಾಲಯದ ಆವರಣದಲ್ಲಿ ವಿವಿಧ ಭಾರತೀಯ ಸಂಗೀತ ವಾದ್ಯಗಳನ್ನು ನುಡಿಸಿದರು.

ಐತಿಹಾಸಿಕ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ದೇಶದ ಎಲ್ಲಾ ಪ್ರಮುಖ ಆಧ್ಯಾತ್ಮಿಕ ಮತ್ತು ಧಾರ್ಮಿಕ ಪಂಥಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ವಿವಿಧ ಬುಡಕಟ್ಟು ಸಮುದಾಯಗಳ ಪ್ರತಿನಿಧಿಗಳು ಸೇರಿದಂತೆ ಸಮಾಜದ ಎಲ್ಲಾ ವರ್ಗದ ಜನರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.


Share with

Leave a Reply

Your email address will not be published. Required fields are marked *