ಮಂಗಳೂರು: ಜ.25ರಂದು ರಾಷ್ಟ್ರೀಯ ಮತದಾನ ದಿನದ ಅಂಗವಾಗಿ ಕಾಲೇಜಿನ ಮತದಾರರ ಸಾಕ್ಷಾರತಾ ಘಟಕ ಮತ್ತು ಭಾರತೀಯ ಜನತಾ ಪಾರ್ಟಿ ಇದರ ಸಹಯೋಗದೊಂದಿಗೆ ಶ್ರೀ ರಾಮ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿತು.


ಇದರ ಅಂಗವಾಗಿ ಬಿಜೆಪಿಯ ಅಧ್ಯಕ್ಷರಾದ ಜೆ ಪಿ ನಡ್ಡ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಯುವ ಮತದಾರನ್ನು ಉದ್ದೇಶಿಸಿ ಮತದಾನದ ಮಹತ್ವದ ಕುರಿತು ಆಡಿದ ಮಾತುಗಳನ್ನು ವಿದ್ಯಾರ್ಥಿಗಳು ಪರದೆಯ ಮೂಲಕ ವೀಕ್ಷಿಸಿದರು.

ಈ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಸಂಸ್ಥಾಪಕರು ಡಾ.ಪ್ರಭಾಕರ್ ಭಟ್ ಕಲ್ಲಡ್ಕ, ಕಿಶೋರ್ ಪಲ್ಲಿಪಾಡಿ ಅಧ್ಯಕ್ಷರು ಬಿಜೆಪಿ ಯುವಮೋರ್ಚಾ ಬಂಟ್ವಾಳ, ಹಿರಿಯರಾದ ಚೆನ್ನಪ್ಪ ಕೋಟ್ಯಾನ್, ಸುದರ್ಶನ್ ಬಜ ಪ್ರಧಾನ ಜಿಲ್ಲಾ ಕಾರ್ಯದರ್ಶಿ ಯುವಮೋರ್ಚಾ ದಕ್ಷಿಣ ಕನ್ನಡ, ವರುಣ್ ರಾಜ್ ಜಿಲ್ಲಾ ಕಾರ್ಯದರ್ಶಿ ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ, ಅಜಿತ್ ಶೆಟ್ಟಿ ಅಧ್ಯಕ್ಷರು ಕಾವಳ ಮೂಡುರು ಗ್ರಾಮ ಪಂಚಾಯಿತಿ, ದಿನೇಶ್ ದoಬೆದಾರ್ ಯುವಮೋರ್ಚಾ ಬಂಟ್ವಾಳ ಹಾಗೂ ಪದವಿ ಕಾಲೇಜಿನ ಪ್ರಾಂಶುಪಾಲರು ಶ್ರೀ ಕೃಷ್ಣಪ್ರಸಾದ್ ಕಾಯರಕಟ್ಟೆ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.




