ಬಂಟ್ವಾಳ: ನರಿಕೊಂಬು ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ

Share with

ಬಂಟ್ವಾಳ: ತಾಲೂಕಿನ ದ.ಕ ಜಿಲ್ಲಾ ಪಂಚಾಯತಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಂತೋಷ್ ಕುಮಾರ್ ಧ್ವಜಾರೋಹಣ ನೆರೆವೇರಿಸಿದರು. ಶಾಲಾ ವಿದ್ಯಾರ್ಥಿಗಳಿಂದ ಶಿಸ್ತು ಬದ್ಧ ಪಥಸಂಚಲನ ಸಾಮೂಹಿಕ ತಾಳ ಬದ್ಧ ಕವಾಯತು ನಡೆಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಂತೋಷ್ ಕುಮಾರ್ ಧ್ವಜಾರೋಹಣ ನೆರೆವೇರಿಸಿದರು.
ಶಾಲಾ ವಿದ್ಯಾರ್ಥಿಗಳಿಂದ ಶಿಸ್ತು ಬದ್ಧ ಪಥಸಂಚಲನ, ಕವಾಯತು ನಡೆಯಿತು.

ಗಣರಾಜ್ಯೋತ್ಸವದ ಮಹತ್ವದ ಕುರಿತು ಆಶಿತಾ ಮಾತನಾಡಿದರು. ವಿದ್ಯಾರ್ಥಿಗಳಿಂದ ಗಣರಾಜ್ಯೋತ್ಸವದ ಬಗ್ಗೆ ಭಾಷಣ ಉತ್ತಮವಾಗಿ ಮೂಡಿ ಬಂತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಉಷಾಲಕ್ಷಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಮೇಘನಾ, ಜಯಶ್ರೀ, ರಶ್ಮಿ, ಶಶಿಕಲಾ, ಚಿತ್ರಾವತಿ, ಕಮಲಾಕ್ಷ, ಕೇಶವ, ತಾಯಂದಿರ ಸಮಿತಿ ಅಧ್ಯಕ್ಷ ಜಯಶ್ರೀ, ಸದಸ್ಯರಾದ ಆಶಾ, ಶಿಕ್ಷಕರು, ವಿದ್ಯಾರ್ಥಿಗಳು, ಮಕ್ಕಳ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಪ್ರೇಮ ಇವರು ಸ್ವಾಗತಿಸಿ ದಿವ್ಯಶ್ರೀ ವಂದಿಸಿ, ಧ್ವಜನಿ ಶ್ರೀಹರ ಕಾರ್ಯಕ್ರಮ ನಿರೂಪಿಸಿದರು.


Share with

Leave a Reply

Your email address will not be published. Required fields are marked *