ಪೆರ್ಲ: ಎಣ್ಮಕಜೆ ಗ್ರಾಮ ಪಂಚಾಯತಿನ ಪೆರ್ಲ ಕುಟುಂಬ ಆರೋಗ್ಯ ಕೇಂದ್ರದ ವತಿಯಿಂದ ಕ್ಷಯ ರೋಗ ನಿರ್ಮೂನೆಯ ಯಜ್ಙದಂತೆ ಪೆರ್ಲದಲ್ಲಿ ಟ್ಯಾಕ್ಷಿ ಚಾಲಕರ ಮೂಲಕ ಕರಪತ್ರ ವಿತರಿಸಿ ಜಾಗೃತಿ ಮೂಡಿಸುವ ಕಾರ್ಯಕ್ರಮದ ಜತೆಗೆ ವಿಶ್ವ ಕ್ಷಯ ರೋಗ ದಿನಾಚರಣೆಯನ್ನು ನಡೆಸಲಾಯಿತು.
ವೈದ್ಯಾಧಿಕಾರಿ ಡಾ.ಗ್ರೀಷ್ಮಾ ಕಾರ್ಯಕ್ರಮ ಉದ್ಘಾಟಿಸಿದರು. ಜ್ಯೂನಿಯರ್ ಹೆಲ್ತ್ ಇನ್ಸ್ ಪೆಕ್ಟರ್ ಸುಜಿತ್ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕುಷ್ಠ ರೋಗ ನಿರ್ಮೂಲನಾ ಪ್ರತಿಜ್ಞೆ ಬೋಧಿಸಲಾಯಿತು.ಬಳಿಕ ಪೇಟೆಯ ಆಟೋ,ಟ್ಯಾಕ್ಸಿ ಚಾಲಕರಿಗೆ ಕರಪತ್ರ ಹಂಚಲಾಯಿತು. ಜ್ಯೂ.ಹೆಲ್ತ್ ಇನ್ಸ್ ಪೆಕ್ಟರ್ ಗಳು, ದಾದಿಯರು, ಆರೋಗ್ಯ ಕಾರ್ಯಕರ್ತರು ಕಾರ್ಯಕ್ರಮಕ್ಕೆ ನೇತೃತ್ವವಹಿಸಿದ್ದರು.