ಉಡುಪಿ: “ನಾನು ಈ ಮೊದಲು ಕಾಂಗ್ರೆಸ್ ಪಕ್ಷದಲ್ಲಿದ್ದೆ. ನಂತರ 10 ವರ್ಷ ಬಿಜೆಪಿಯಲ್ಲಿದ್ದೆ. ಈಗ ಮತ್ತೆ ಮಾತೃ ಪಕ್ಷಕ್ಕೆ ಮರಳಿದ್ದೇನೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಬೈಂದೂರು ಕ್ಷೇತ್ರದಿಂದ ಅತಿ ಹೆಚ್ಚು ಮುನ್ನಡೆ ಮಾಡಿಕೊಡುತ್ತೇವೆ” ಎಂದು ಮಾಜಿ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಹೇಳಿದರು.
ಬಿಜೆಪಿ ಅಭ್ಯರ್ಥಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸುಕುಮಾರ್ ಶೆಟ್ಟಿ ಅವರು, ಕೋಟ ಶ್ರೀನಿವಾಸ ಪೂಜಾರಿ ಹೇಳುವುದೆಲ್ಲವೂ ಸುಳ್ಳು ಎಂದು ಟೀಕಿಸಿದರು.