ಎಸ್ ಡಿಪಿಐ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ: ಶಾಸಕ ಯಶ್ ಪಾಲ್ ಸುವರ್ಣ

Share with

ಉಡುಪಿ: ರಾಜ್ಯಾದ್ಯಂತ ಹತ್ತಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದ ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ನಾಮಪತ್ರವನ್ನು ಸಲ್ಲಿಕೆ ಮಾಡದೆ ತಟಸ್ಥವಾಗಿದೆ.

ಉಡುಪಿ ಶಾಸಕ ಯಶ್ ಪಾಲ್ ಸುವರ್ಣ

ರಾಜ್ಯ ಲೋಕಸಭಾ ಚುನಾವಣೆಯ ಮೊದಲ ಹಂತದ ನಾಮಪತ್ರ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈವರೆಗೆ ಯಾರೂ ಆ ಪಕ್ಷದಿಂದ ಉಮೇದುವಾರಿಕೆ ಸಲ್ಲಿಸಿಲ್ಲ. ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಗಿಂತ ಹೆಚ್ಚು ಪ್ರಭಾವಶಾಲಿಯಾಗಿ ಸ್ಪರ್ಧೆ ಕೊಡುತ್ತೇವೆ ಎಂದು ಈ ಹಿಂದೆ ಎಸ್ ಡಿಪಿಐ ಹೇಳಿತ್ತು.

ಈ ಕುರಿತು ಪ್ರತಿಕ್ರಿಯೆ ನೀಡಿದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು, ಎಸ್ ಡಿಪಿಐ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಈ ಹಿಂದೆ ಸಿದ್ದರಾಮಯ್ಯ ಎಸ್ ಡಿಪಿಐ ಕಾರ್ಯಕರ್ತರ ಮೇಲಿದ್ದ ಕೇಸ್ ಗಳನ್ನು ವಾಪಾಸ್ ಪಡೆದಿದ್ದರು. ಈಗ ಎಸ್ ಡಿಪಿಐ ಕಾಂಗ್ರೆಸ್ ಗೆ ಬೆಂಬಲ ನೀಡುವ ಮೂಲಕ ಅವರ ಋಣ ತೀರಿಸಿದೆ ಎಂದರು.


Share with

Leave a Reply

Your email address will not be published. Required fields are marked *