ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಮೇರು ನಟನಾಗಿ ಗುರುತಿಸಿಕೊಂಡಿದ್ದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್(81 ವ) ರವರು ಎ.16ರಂದು ಹೃದಯಾಘಾತದಿಂದ ನಿಧನಹೊಂದಿದ್ದಾರೆ. ಕನ್ನಡದಲ್ಲಿ ಸಾಲು ಸಾಲು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಅವರು ಇನ್ನಿಲ್ಲ ಎಂಬ ಸುದ್ದಿ ಸಾಕಷ್ಟು ನೋವುಂಟು ಮಾಡಿದೆ. ಹಲವು ದಿಗ್ಗಜರ ಜೊತೆ ಅವರು ನಟಿಸಿದ್ದ ಇವರು ವಿಷ್ಣುವರ್ದನ್ ಹಾಗೂ ಇವರು ನಟಿಸಿದ್ದ ಕಳ್ಳ-ಕುಳ್ಳ ಸಿನೆಮಾದಲ್ಲಿ ಇವರಿಬ್ಬರ ಜೋಡಿ ಬಹಳಷ್ಟು ಸದ್ದು ಮಾಡಿತ್ತು.
ರಾತ್ರಿ ಲೂಸ್ ಮೋಷನ್ ಆಗಿದ್ದರಿಂದ ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ಮಲಗಿದ್ದವರು ಮತ್ತೆ ಏಳಲೇ ಇಲ್ಲ. ಅವರಿಗೆ ಹೃದಯಾಘಾತ ಆಗಿದೆ ಎಂದು ದ್ವಾರಕೀಶ್ ಪುತ್ರ ಯೋಗಿ ಅವರು ಮಾಹಿತಿ ನೀಡಿದ್ದಾರೆ.
ಚಿತ್ರರಂಗದಲ್ಲಿ ಮೂಡಿದ ಕಪ್ಪು ಛಾಯೆ
ದ್ವಾರಕೀಶ್ ಅವರ ನಿಧನವಾರ್ತೆ ತಿಳಿಯುತ್ತಿದ್ದಂತೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಫ್ಯಾನ್ಸ್ ಸಂತಾಪ ಸೂಚಿಸುತ್ತಿದ್ದಾರೆ. ಈ ಹಿಂದೆ ದ್ವಾರಕೀಶ್ ಮರಣ ಫೇಕ್ ಸುದ್ದಿ ಹರಿದಾಡಿತ್ತು. ಇದೇ ರೀತಿ ಈ ಬಾರಿಯೂ ಆಗಿರಬಹುದು ಎಂದು ಹಲವರು ಭಾವಿಸಿದ್ದರು. ಇದೀಗ ದ್ವಾರಕೀಶ್ ರವರ ಕುಟುಂಬದವರು ಅವರ ನಿಧನ ಸುದ್ದಿಯನ್ನು ಖಚಿತಪಡಿಸಿದ್ದಾರೆ.
ದ್ವಾರಕೀಶ್ ರವರ ಹಲವಾರು ದಿಗ್ಗಜರೊಂದಿಗೆ ಸ್ಕ್ರೀನ್ ಹಂಚಿಕೊಂಡಿದ್ದರು. ಮಮತೆಯ ಬಂಧನ ಇವರ ಮೊದಲ ನಿರ್ಮಾಣದ ಚಿತ್ರವಾಗಿದ್ದು, ‘ವೀರ ಸಂಕಲ್ಪ’ ಅವರು ನಟಿಸಿರುವ ಕೊನೆಯ ಚಿತ್ರವಾಗಿದೆ.