ಕಾಂಗ್ರೆಸ್ ಕಾರ್ಮಿಕ ಘಟಕದ ಮಾಜಿ  ಅಧ್ಯಕ್ಷ ಶಿವಕುಮಾರ್ ಕೌಡಿಚ್ಚಾರ್ ಅವರು ಅಪಘಾತದಲ್ಲಿ ನಿಧನ

Share with

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಮಾಜಿ  ಅಧ್ಯಕ್ಷ ಶಿವಕುಮಾರ್ ಕೌಡಿಚ್ಚಾರ್ ಅವರು ಅಪಘಾತದಲ್ಲಿ ಮೃತಪಟ್ಟಿರುವುದು ನನಗೆ ತೀವ್ರ ಆಘಾತ ತಂದಿದೆ. ಅವರ ಅಕಾಲಿಕ ಮರಣ ತುಂಬಾ ನೋವು ತಂದಿದೆ. ಒಬ್ಬ ಆತ್ಮೀಯನನ್ನು ಕಳೆದುಕೊಂಡು ನಾನು ದುಃಖಿತನಾಗಿದ್ದೇನೆ.
ಅವರು ತಮ್ಮ ಜೀವನವನ್ನು ಸಮಾಜ ಸೇವೆಗೆ ಮುಡುಪಾಗಿಟ್ಟಿದ್ದರು. ಕಾರ್ಮಿಕ ಪರ ಹೋರಾಟ ಸಂಘಟಿಸಿ ಕಾರ್ಮಿಕರ ನ್ಯಾಯ ಒದಗಿಸುತ್ತಿದ್ದರು. ಸುಳ್ಯ, ಪುತ್ತೂರು ಭಾಗದಲ್ಲಿ ತಮಿಳು ನಿರಾಶ್ರಿತರ ಸೇವೆ ಮಾಡುತ್ತಿದ್ದರು. ತಮಿಳು ನಿರಾಶ್ರಿತರ ಉತ್ತಮ ಜೀವನಕ್ಕಾಗಿ ನಿರಂತರ ಕಾರ್ಯ ಮಾಡುತ್ತಿದ್ದರು.
ಅತ್ಯುತ್ತಮ ಸಂಘಟಕರಾಗಿದ್ದ ಅವರು ಪುತ್ತೂರು, ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಉತ್ತಮವಾಗಿ ಸಂಘಟಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಮತ್ತು ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅಭ್ಯರ್ಥಿ ಪರ ಹಗಲಿರುಳು ಶ್ರಮಿಸಿದ್ದರು.
ಅವರ ಅಕಾಲಿಕ ಮರಣ ಕಾಂಗ್ರೆಸ್ ಪಕ್ಣಕ್ಕೆ ತುಂಬಲಾರದ ನಷ್ಟ.
ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವರ ಕುಟುಂಬ, ಬಂಧುಮಿತ್ರರು, ಹಿತೈಷಿಗಳಿಗೆ ನೋವು ಸಹಿಸುವ ಶಕ್ತಿ ಸಿಗುವಂತಾಗಲಿ ಎಂದು ಪ್ರಾರ್ಥಿಸುತ್ತೇನೆ


Share with

Leave a Reply

Your email address will not be published. Required fields are marked *