ಪಾರ್ಥೀವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆ

Share with

ನವದೆಹಲಿ: ಕುವೈತ್‌ ಕಟ್ಟಡ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಪಾರ್ಥೀವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನದ ಕುವೈತ್ ನಿಂದ ಶುಕ್ರವಾರ ಮುಂಜಾನೆ ಕೇರಳಕ್ಕೆ ಹೊರಟಿದೆ.
ಈ ವಿಚಾರವನ್ನು ಕೇಂದ್ರ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ‘ಎಕ್ಸ್ ನಲ್ಲಿ ಖಚಿತಪಡಿಸಿದ್ದಾರೆ. ಅಲ್ಲದೆ ವಿಮಾನ ಇಳಿಯಲಿರುವ ಕೊನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಮತ್ತು ಆಂಬ್ಯುಲೆನ್ಸ್‌ ಗಳ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಳೆದ ಬುಧವಾರ ಕುವೈತ್ ನ ದಕ್ಷಿಣ ನಗರವಾದ ಮಂಗಾಫ್ ನಗರದ ಆರು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 48 ಜನರು ಸಾವನ್ನಪ್ಪಿದ್ದಾರೆ. ವಸತಿ ಸೌಲಭ್ಯದಲ್ಲಿರುವ 176 ಭಾರತೀಯ ಕಾರ್ಮಿಕರಲ್ಲಿ 45 ಮಂದಿ ಸಾವನ್ನಪ್ಪಿದ್ದಾರೆ ಮತ್ತು 33 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಯಭಾರ ಕಚೇರಿ ತಿಳಿಸಿದೆ. ಉಳಿದವರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ಇದಾದ ಬಳಿಕ ಗುರುವಾರ ಕುವೈತ್‌ನ ಅಧಿಕಾರಿಗಳು ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದ 45 ಭಾರತೀಯರು ಮತ್ತು ಮೂವರು ಫಿಲಿಪಿನೋ ಪ್ರಜೆಗಳ ಶವಗಳನ್ನು ಗುರುತಿಸಿದ್ದಾರೆ. ಘಟನೆಯ ಕುರಿತು ತ್ವರಿತವಾಗಿ ತನಿಖೆ ನಡೆಸುವುದಾಗಿ ಕುವೈತ್ ಪ್ರತಿಜ್ಞೆ ಮಾಡಿದೆ ಮತ್ತು ಸಂತ್ರಸ್ತರ ಪಾರ್ಥಿವ ಶರೀರವನ್ನು ಸ್ವದೇಶಕ್ಕೆ ತರಲು ಸಂಪೂರ್ಣ ಬೆಂಬಲವನ್ನು ಭರವಸೆ ನೀಡಿತ್ತು.
ಮೃತರಲ್ಲಿ ಕೇರಳದ 23, ತಮಿಳುನಾಡಿನ ಏಳು, ಉತ್ತರ ಪ್ರದೇಶದ ಮೂವರು, ಒಡಿಶಾದ ಇಬ್ಬರು ಮತ್ತು ಬಿಹಾರ, ಪಂಜಾಬ್, ಕರ್ನಾಟಕ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಹರಿಯಾಣದಿಂದ ತಲಾ ಒಬ್ಬರು ಸೇರಿದ್ದಾರೆ.


Share with

Leave a Reply

Your email address will not be published. Required fields are marked *