ಉಡುಪಿ ಹನುಮಂತನಗರ ಶಾಲೆಯ ಎಲ್ ಕೆಜಿ ವಿಭಾಗ ಪ್ರಾರಂಭೋತ್ಸವ

Share with

ಉಡುಪಿ: ಕೇಂದ್ರ ಸರಕಾರದ ಪಿಎಂ ಶ್ರೀ ಯೋಜನೆಯಡಿ ಮಂಜೂರಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹನುಮಂತ ನಗರ, ನಿಟ್ಟೂರು ಇದರ ಆಂಗ್ಲ ಮಾಧ್ಯಮ ವಿಭಾಗದ ಎಲ್. ಕೆ. ಜಿ. ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಬಳಿಕ ಮಾತನಾಡಿ ಶಾಸಕ ಯಶ್ಪಾಲ್ ಸುವರ್ಣ ಅವರು, ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಮೂಲಕ ಗ್ರಾಮೀಣ ಹಾಗೂ ನಗರ ಭಾಗದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗಲಿದ್ದು, ಮುಂದಿನ ದಿನಗಳಲ್ಲಿ ಇತರ ಶಾಲೆಗಳಿಗೂ ವಿಸ್ತರಿಸುವ ಆಶಯವ್ಯಕ್ತಪಡಿಸಿದರು.
ಸಮಾರಂಭದಲ್ಲಿ ನಗರಸಭಾ ಸದಸ್ಯರಾದ ಸಂತೋಷ್ ಜತ್ತನ್, ನಗರಸಭೆಯ ಮಾಜಿ ಅಧ್ಯಕ್ಷರಾದ ಯುವರಾಜ್, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲೆಯ ಶಿಕ್ಷಕರು ಹಾಗೂ ಶಾಲಾಭಿಮಾನಿಗಳು, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *