ಕರಂದಾಡಿ ಶ್ರೀರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Share with


ಉಡುಪಿ: ಸಮಾಜರತ್ನ ದಿ. ಲೀಲಾಧರ ಶೆಟ್ಟಿ ಕರಂದಾಡಿ ಅವರ ಸ್ಮರಣಾರ್ಥ ಕರಂದಾಡಿ ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ದಾನಿಗಳ ನೆರವಿನೊಂದಿಗೆ ಈ ಸಾಲಿನ ಅವರ್ತಿತ ಠೇವಣಿ ಉದ್ಘಾಟನಾ ಸಮಾರಂಭ ನಡೆಯಿತು.
ಕಾಪು ಶಾಸಕರಾದ ಗುರ್ಮೆ ಸುರೇಶ್ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಪುಸ್ತಕ ವಿತರಣೆ ಮಾಡಿ, ಈ ಸಾಲಿನ ಅವರ್ತಿತ ಠೇವಣಿ ಉದ್ಘಾಟಿಸಿದರು.
ಶಾಲಾ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷ ರವಿರಾಜ್ ಶೆಟ್ಟಿ ಪಂಜಿತ್ತೂರುಗುತ್ತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಸಾದ್ ಶೆಟ್ಟಿ ವಳದೂರು, ಪುಸ್ತಕದ ದಾನಿ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಮಿಥುನ್ ಶೆಟ್ಟಿ, ಪ್ರೊಜೆಕ್ಟರ್ ದಾನಿ ದಿನೇಶ್ ಶೆಟ್ಟಿ ಕಲ್ಲಾಳ, ಸವಿತಾ ಸಮಾಜ ವಿವಿಧೋದ್ದೇಶದ ಸಹಕಾರಿ ಸಂಘದ ಅಧ್ಯಕ್ಷ ಗೋವಿಂದ ಭಂಡಾರಿ ಬನ್ನಂಜೆ, ಎಸ್.ಡಿ.ಎಂ.ಸಿ ಅಧ್ಯಕ್ಷ ಪದ್ಮನಾಭ ಶ್ಯಾನುಭಾಗ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಾಸುದೇವ ರಾವ್, ಮಜೂರು ಬದ್ರಿಯಾ ಜುಮ್ಮಾ ಮಸೀದಿಯ ಅಧ್ಯಕ್ಷ ಶೌಕತ್‌ ಅಲಿ, ಕಲ್ಪವೃಕ್ಷ ಕನ್ನಡ ಮಾಧ್ಯಮ ಸಂಘದ ಅಧ್ಯಕ್ಷ ಶ್ರೀಧರ ಶೆಟ್ಟಿಗಾರ್, ವಿದ್ಯಾ ವಿಧಾತ  ಸಂಂಘದ ಸಂಚಾಲಕ ನಾಗಭೂಷಣ್ ರಾವ್, ಮುಖ್ಯೋಪಾಧ್ಯಾಯ ಆರ್.ಎಸ್. ಕಲ್ಲೂರ ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *