ಕಮಲಶಿಲೆ ದೇವಾಲಯದಲ್ಲಿ ನೈಸರ್ಗಿಕ ಪುಣ್ಯಸ್ನಾನ; ದೇವಿಯ ಚರಣ ಸ್ಪರ್ಶಿಸಿದ ಕುಬ್ಜಾ ನದಿ ನೀರು

Share with



ಉಡುಪಿ: ಉಡುಪಿಯ ಕುಂದಾಪುರ ತಾಲೂಕಿನ ಕಮಲಶಿಲೆ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನದೊಳಗೆ ಕುಬ್ಜ ನದಿ ನೀರು ಹರಿದಿದೆ. ಬೆಳಗಿನ ಜಾವ ಮೂರುವರೆ ಸುಮಾರಿಗೆ ದೇವಿಯ ಚರಣವನ್ನು ಕುಬ್ಜಾ ನದಿ ನೀರು ಸ್ಪರ್ಶ ಮಾಡಿದೆ. ಈ ಮೂಲಕ ದೇವಸ್ಥಾನದಲ್ಲಿ ನೈಸರ್ಗಿಕ ಪುಣ್ಯಸ್ನಾನ ನಡೆದಿದೆ.
ಗರ್ಭಗುಡಿಗೆ ನೀರು ಬರುತ್ತಿದ್ದಂತೆ ಅರ್ಚಕರು ಮಂಗಳಾರತಿ ಮಾಡಿದ್ದಾರೆ. ವರ್ಷಂಪ್ರತಿ ಒಂದು ಬಾರಿ ಗರ್ಭಗುಡಿಗೆ ಕುಬ್ಜಾ ನದಿ ನೀರು ಬರುತ್ತದೆ. ಈ ನೈಸರ್ಗಿಕ ಪುಣ್ಯಸ್ನಾನಕ್ಕೆ ಭಕ್ತರು ಕಾತರದಿಂದ ಕಾಯುತ್ತಾರೆ. ಸದ್ಯ ನೀರು ಇಳಿಮುಖವಾಗಿ ದೇವಾಲಯದಿಂದ ತೆರವು ಮಾಡಲಾಗಿದೆ.


Share with

Leave a Reply

Your email address will not be published. Required fields are marked *