ಹಾನಿಯಾದ ಮನೆಗೆ ತಕ್ಷಣವೇ ಪರಿಹಾರ ನೀಡುವಂತೆ ನಿವಾಸಿಗಳ ಆಗ್ರಹ
ಉಡುಪಿ: ಭಾರೀ ಸುಂಟರಗಾಳಿಗೆ ಅಮಾವಾಸ್ಯೆಬೈಲು ಗ್ರಾಮದ ರಟ್ಟಾಡಿಯಲ್ಲಿ 40ಕ್ಕೂ ಅಧಿಕ ಮನೆಗಳಿಗೆ ಹಾನಿ ಉಂಟಾಗಿದೆ. ಆ ಪೈಕಿ 20ಕ್ಕೂ ಅಧಿಕ ಮನೆಗಳಿಗೆ ಸಂಪೂರ್ಣ ಹಾನಿಯಾಗಿದ್ದು, ಉಳಿದ 20 ಮನೆಗಳಿಗೆ ಭಾಗಶಃ ಹಾನಿಯಾಗಿದೆ.
ಘಟನಾ ಸ್ಥಳಕ್ಕೆ ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ತಹಶೀಲ್ದಾರ್ ಶೋಭಾ ಲಕ್ಷ್ಮಿ, ಅಮಾವಾಸ್ಯೆಬೈಲ್ ಪಿಡಿ ಓಸ್ವಾಮೀನಾಥನ್ ಹಾಗೂ ಗ್ರಾಮ ಪಂಚಾಯತಿ ಸದಸ್ಯ ಜಯಪ್ರಕಾಶ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾನಿಯಾದ ಮನೆ, ಕೃಷಿ ಭೂಮಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಹಾನಿಯಾದ ಮನೆಗೆ ಆದಷ್ಟು ಬೇಗ ಪರಿಹಾರ ನೀಡುವಂತೆ ನಿವಾಸಿಗಳು ಆಗ್ರಹಿಸಿದರು.