ಮoಜೇಶ್ವರ: ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ ಕಾಸರಗೋಡು, ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘ, ಶಂಪಾ ಪ್ರತಿಷ್ಟಾನ ಬೆಂಗಳೂರು, ವಿಕಾಸ ಮೀಯಪದವು ಇವರ ಸಂಯುಕ್ತ ಆಶ್ರಯದಲ್ಲಿ ಡಾ.ನಾ. ಮೊಗಸಾಲೆ ಪೌರಾಭಿನಂದನೆ ಹಾಗೂ ಸಾಹಿತ್ಯಸಮೀಕ್ಷೆ ಕಾರ್ಯಕ್ರಮ ೧೦-೮-೨೦೨೪ ರಂದು ಬೆಳಿಗ್ಗೆ ೧೦ರಿಂದ ಸಂಜೆ ೫ರ ತನಕ ಮೀಯಪದವು ಶ್ರೀ ವಿದ್ಯಾವರ್ಧಕ ಉನ್ನತ ಪ್ರೌಢ ಶಾಲೆಯ ನಾರಾಯಣೀಯಂ ರಂಗಮoದಿರದಲ್ಲಿ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇದರ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಉದ್ಘಾಟಿಸುವರು. ಹಲವಾರು ಗಣ್ಯರು ಭಾಗವಹಿಸುವರು.