ಏಮಾಜೆ ಕಿ. ಪ್ರಾ.ಶಾಲೆಗೆ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಹಾಗೂ ಅಭ್ಯುದಯ ಪ್ರಶಸ್ತಿ

Share with

ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಗೆ ದಿನಾಂಕ 27/07/2024 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಸತ್ಯ ಸಾಯಿ ಗ್ರಾಮದಲ್ಲಿ ಶ್ರೀ ಸತ್ಯಸಾಯಿ  ಅನ್ನಪೂರ್ಣ ಟ್ರಸ್ಟ್ ಅವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ-2024 ನ್ನು ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ನ ಸಂಸ್ಥಾಪಕರಾದ ಸದ್ಗುರು ಶ್ರೀಮಧುಸೂದನ್ ಸಾಯಿ ಅವರು ಪ್ರದಾನ ಮಾಡಿದರು. ಶಾಲೆಯ ಮುಖ್ಯ ಗುರುಗಳಾದ ಡಾ.ತ್ರಿವೇಣಿಯವರು ಪ್ರಶಸ್ತಿಯನ್ನು ಸ್ವೀಕರಿಸಿದರು.  ಕರ್ನಾಟಕ ರಾಜ್ಯದಲ್ಲಿ ಆಯ್ದ 120 ಶಾಲೆಗಳ ಪೈಕಿ ಏಮಾಜೆ ಕಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿರುವುದು ಬಂಟ್ವಾಳ ತಾಲೂಕಿಗೆ ಹೆಮ್ಮೆಯ ವಿಷಯವಾಗಿದೆ.
ಪ್ರಶಸ್ತಿಯು ಸನ್ಮಾನ ಪತ್ರ ಹಾಗೂ ಶಾಲೆಯ ಹಸಿರು ವನದ ಅಭಿವೃದ್ಧಿಗೆ 10,000 ರೂಗಳ ಚೆಕ್ ನ್ನು ಒಳಗೊಂಡಿದೆ. ಮಾತ್ರವಲ್ಲದೆ ಮಕ್ಕಳಿಗಾಗಿ ಮೌಲ್ಯ ಶಿಕ್ಷಣ ಆಧಾರಿತ ಪುಸ್ತಕಗಳು, ಚಾಕಲೇಟ್ ಗಳು, ಶಿಕ್ಷಕರಿಗೆ ಡೈರಿ ಹಾಗೂ ಮುಖ್ಯ ಶಿಕ್ಷಕರಿಗೆ  ಕೈಗಡಿಯಾರವನ್ನು ಪ್ರಶಸ್ತಿಯೊಂದಿಗೆ ನೀಡಿರುತ್ತಾರೆ.


Share with

Leave a Reply

Your email address will not be published. Required fields are marked *