ಲೋಕಸಭಾ ಸಚೇತಕರಾಗಿ ಕೋಟಾ ಶ್ರೀನಿವಾಸ ಪೂಜಾರಿ

Share with

ಚಿಕ್ಕಮಗಳೂರು-ಉಡುಪಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಲೋಕಸಭಾ ಸಚೇತಕರಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ಈ ಕುರಿತಂತೆ ಬಿಜೆಪಿಯ ಪಾರ್ಲಿಮೆಂಟರಿ ಆಫೀಸ್ ಸೆಕ್ರೇಟರಿ ಡಾ.ಶಿವ್ ಶಕ್ತಿ ನಾಥ್ ಭಕ್ಷಿ ಅವರು, ಡಾ.ಸಂಜಯ್‌ ಜೈಸ್ವಾಲ್‌ ಅವರನ್ನು ಲೋಕಸಭೆಯ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಿದ್ದರೆ, ಇನ್ನುಳಿದ 16 ಜನರನ್ನು ಸಚೇತಕರನ್ನಾಗಿ ನೇಮಿಸಲಾಗಿದೆ. ಇನ್ನು ಈ 16 ಜನರ ಸಚೇತಕರ ಪೈಕಿ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೂ ಸ್ಥಾನ ಸಿಕ್ಕಿದೆ.


Share with