ರಸ್ತೆ ಸಮೇತ ಕೊಚ್ಚಿ ಹೋದ ಭೂಮಿ

Share with

ಹಾಸನದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಬೃಹತ್‌ ಪ್ರಮಾಣದ ಭಯಾನಕ ಭೂ ಕುಸಿತ ಸಂಭವಿಸಿದೆ.

ಸಕಲೇಶಪುರದ ಕುಂಬರಡಿ ಹಾರ್ಲೇ ಎಸ್ಟೇಟ್ ಬಳಿ 200 ಮೀ.ಗೂ ಹೆಚ್ಚು ದೂರ ರಸ್ತೆ ಸಮೇತ ಭೂಮಿ ಕೊಚ್ಚಿ ಹೋಗಿದೆ. ಈ ಪರಿಣಾಮ ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ದಾರಿಗಳೇ ಜಲಾವೃತವಾಗಿ ಜನರ ಆತಂಕ ಹೆಚ್ಚಾಗಿದೆ.

ಜನರ ಪರದಾಟದ ನಡುವೆಯೂ ಜಿಲ್ಲಾಡಳಿತ ರಜೆ ನೀಡದಿರುವುದು ಅಚ್ಚರಿಗೆ ಕಾರಣವಾಗಿದೆ. ಶಾಲೆಗಳಿಗೆ ತೆರಳಲು ವಿದ್ಯಾರ್ಥಿಗಳು, ಶಿಕ್ಷಕರು ಪರದಾಡುವಂತಾಗಿದೆ.


Share with