ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಬಿಂದಾಸ್ ಲೈಫ್ ನಡೆಸುತ್ತಿರುವ ಬಗ್ಗೆ ವರದಿ ಪ್ರಕಟಗೊಂಡ ಬೆನ್ನಲ್ಲೇ ಅವರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸೂಚನೆ ನೀಡಿದ್ದಾರೆ. ಆದರೆ, ಸ್ಥಳಾಂತರ ಪ್ರಕ್ರಿಯೆ ತಡವಾಗುವ ಸಾಧ್ಯತೆ ಹೆಚ್ಚಿದೆ. ಓರ್ವ ವಿಚಾರಣಾಧೀನ ಕೈದಿಯನ್ನು ಬೇರೆ ಜೈಲಿಗೆ ಶಿಫ್ಟ್
ಮಾಡಲು ನ್ಯಾಯಾಲಯದ ಅನುಮತಿ ಬೇಕು. ನ್ಯಾಯಾಲಯಕ್ಕೆ ಮನವರಿಗೆ ಆದರೆ ಮಾತ್ರ ಈ ಸಂಬಂಧ ಆದೇಶ ನೀಡಬಹುದು. ಅಲ್ಲಿಯವರೆಗೆ ಕಾಯಬೇಕಾಗಿದೆ