ಕೊಲ್ಕತ್ತಾ: ಪಶ್ಚಿಮ ಬಂಗಾಳದ ಕೊಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆಯಾದ ನಂತರ ಇಡೀ ಪಶ್ಚಿಮ ಬಂಗಾಳದಲ್ಲಿ ಕೋಲಾಹಲ ಉಂಟಾಗಿದೆ. ಈ ಕುರಿತು ಬಿಜೆಪಿ 12 ಗಂಟೆಗಳ ‘ಬಂಗಾಳ ಬಂದ್’ಗೆ ಕರೆ ನೀಡಿದೆ. ಈ ಸಂದರ್ಭದಲ್ಲಿ ಹಲವೆಡೆ ಹಿಂಸಾಚಾರ ಮತ್ತು ಘರ್ಷಣೆಗಳು ಕಂಡುಬಂದವು. ಕೆಲವು ಸ್ಥಳಗಳಲ್ಲಿ ಟಿಎಂಸಿ ಕಾರ್ಯಕರ್ತರು ತಮ್ಮ ಮೇಲೆ ಬಾಂಬ್ ಎಸೆದು, 6-7 ಗುಂಡುಗಳನ್ನು ಸಹ ಹಾರಿಸಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಇದರ ನಡುವೆ ಉತ್ತರ ದಿನಾಜ್ಪುರದಲ್ಲಿ ಅತ್ಯಂತ ವಿಶಿಷ್ಟವಾದ ವಿಡಿಯೋಗಳು ವೈರಲ್ ಆಗಿವೆ. ಅಲ್ಲಿ ಸರ್ಕಾರಿ ಬಸ್ ಚಾಲಕರೊಬ್ಬರು ಹೆಲ್ಮೆಟ್ ಧರಿಸಿ ಬಸ್ ಓಡಿಸುತ್ತಿರುವುದು ಕಂಡುಬಂದಿದೆ. ಬಿಜೆಪಿಯ 12 ಗಂಟೆಗಳ ‘ಬಂಗಾಳ ಬಂದ್’ ಸಮಯದಲ್ಲಿ ಉತ್ತರ ದಿನಾಜ್ಪುರದಲ್ಲಿ ಉತ್ತರ ಬಂಗಾಳ ರಾಜ್ಯ ಸಾರಿಗೆ ಸಂಸ್ಥೆಯ (NBSTC) ಬಸ್ಗಳ ಚಾಲಕರು ಹೆಲ್ಮೆಟ್ ಧರಿಸಿರುವುದು ಕಂಡುಬಂದಿದೆ. ಬಂದ್ನಿಂದಾಗಿ ಇಂದು ಹೆಲ್ಮೆಟ್ ಧರಿಸಿದ್ದೇವೆ, ಸುರಕ್ಷತೆ ದೃಷ್ಟಿಯಿಂದ ಹೆಲ್ಮೆಟ್ ಧರಿಸುವಂತೆ ಸರ್ಕಾರ ಸೂಚನೆ ನೀಡಿದೆ ಎಂದು ಬಸ್ ಚಾಲಕರೊಬ್ಬರು ತಿಳಿಸಿದರು.