ಅಕ್ಷಯ  ಕಾಲೇಜ್ : ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ

Share with

ಪುತ್ತೂರು:  ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ  ಘಟಕ ಗಳು, ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶದ  ಸಹಭಾಗಿತ್ವದಲ್ಲಿ ಮತ್ತು ಆರ್ಯಾಪು ಪಂಚಾಯತ್ ನ   ಸಹಕಾರದೊಂದಿಗೆ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯನ್ನು ಪಂಚಾಯಿತಿನ ಸಭಾಂಗಣದಲ್ಲಿ ಆಚರಿಸಲಾಯಿತು.

ಆರ್ಯಾಪು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಶ್ರೀ ನಾಗೇಶ್ ಕುಮಾರ್   ಸ್ವಾಗತಿಸಿ,ಪ್ರಾಸ್ತಾವಿಕವಾಗಿ ಮಾತನಾಡಿ ಆಚರಣೆಯ ಮಹತ್ವವನ್ನು ತಿಳಿಸಿದರು .
ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು, ಸ್ಥಳೀಯ ನಾಗರಿಕರು, ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳು, ಸಹ ಯೋಜನಾಧಿಕಾರಿಗಳು ಮತ್ತು ರಾಷ್ಟ್ರೀಯ ಸೇವಾ  ಯೋಜನಾ ಸ್ವಯಂ ಸೇವಕ, ಸೇವಕಿ ಪಾಲ್ಗೊಂಡರು .

ಕಾರ್ಯಕ್ರಮದ ಭಾಗವಾಗಿ ಸಂಪ್ಯ ಪರಿಸರದಲ್ಲಿ  ಸ್ವಚ್ಛತಾ ಅಭಿಯಾನ ಮಾಡಲಾಯಿತು.


Share with

Leave a Reply

Your email address will not be published. Required fields are marked *