ಕೊಟ್ಟ ಮಾತು ಉಳಿಸಿಕೊಂಡ ಕನ್ನಡಿಗ: ಬಡ ವಿದ್ಯಾರ್ಥಿಯ ಫೀಸ್ ಕಟ್ಟಿದ ಕೆಎಲ್ ರಾಹುಲ್

Share with

ಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಹೃದಯವಂತ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಈ ಹಿಂದೆ ಹಲವು ಚಾರಿಟಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಹಲವರಿಗೆ ನೆರವಾಗಿದ್ದರು. ಅದರಲ್ಲೂ ಬಾಗಲಕೋಟೆಯ ವಿದ್ಯಾರ್ಥಿಯೊಬ್ಬ ಅಮೃತ್ ಮಾವಿನಕಟ್ಟೆ ಅವರ ಕಾಲೇಜ್ ಫೀಸ್ ಭರಿಸುವ ಮೂಲಕ ಗಮನ ಸೆಳೆದಿದ್ದರು. ಇದೀಗ ಅದೇ ಅಮೃತ್ ಅವರ ದ್ವಿತೀಯ ವರ್ಷದ ಶೈಕ್ಷಣಿಕ ಶುಲ್ಕವನ್ನು ಕೆಎಲ್ ರಾಹುಲ್ ಭರಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ನಿವಾಸಿ ಅಮೃತ್ ಮಾವಿನಕಟ್ಟಿ ಅವರು ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿರುವ ಕೆಎಲ್ಇ ಟೆಕ್ನಾಲಜಿಕಲ್ ಯೂನಿವರ್ಸಿಟಿಯಲ್ಲಿ ಬಿ.ಕಾಮ್ ಮಾಡುತ್ತಿದ್ದಾರೆ. ಇವರ ಮೊದಲ ವರ್ಷದ ಸಂಪೂರ್ಣ ಶುಲ್ಕವನ್ನು ಕೆಎಲ್ ರಾಹುಲ್ ಕಟ್ಟಿದ್ದರು. ಇದೀಗ ದ್ವಿತೀಯ ವರ್ಷದ ಫೀಸ್ ಅನ್ನು ಸಹ ರಾಹುಲ್ ಭರಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಮೃತ್ ಮಾವಿನಕಟ್ಟಿ, ಕೆ.ಎಲ್.ರಾಹುಲ್ ಅವರು ಕಳೆದ ವರ್ಷ ಕಾಲೇಜಿಗೆ ಪ್ರವೇಶ ಪಡೆಯಲು ಸಹಕರಿಸಿದ್ದರು. ಅಲ್ಲದೆ ಎರಡನೇ ವರ್ಷವೂ ಆರ್ಥಿಕವಾಗಿ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದರು. ಈ ಮಾತಿನಂತೆ ಈಗ ನನ್ನ ಎರಡನೇ ವರ್ಷದ ಅಧ್ಯಯನಕ್ಕಾಗಿ 75,000 ರೂ. ಪಾವತಿಸಿದ್ದಾರೆ ಎಂದು ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *