ಸಂತಡ್ಕ ಶ್ರೀ ಅರಸು ಸಂಕಲ ದೈವ ಕ್ಷೇತ್ರ ಬ್ರಹ್ಮ ಕಲಶ ಹಾಗೂ ವಾರ್ಷಿಕ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Share with


ಉಪ್ಪಳ: ಶ್ರೀ ಅರಸು ಸಂಕಲ ದೈವ ಕ್ಷೇತ್ರ ಸಂತಡ್ಕ ಇದರ ಪುನರ್ ಪ್ರತಿಷ್ಟಾ ಬ್ರಹ್ಮಕಲಶ ಹಾಗೂ ವಾರ್ಷಿಕ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಕ್ಷೇತ್ರ ಅಡಳಿತ ಸಮಿತಿ ಅಧ್ಯಕ್ಷ ಡಾ.ಶ್ರೀಧರ ಭಟ್ ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿದರು. ಈ ವೇಳೆ ಸಮಿತಿ ಪದಾಧಿಕಾರಿಗಳು ಹಾಗೂ ಊರವರು ಉಪಸ್ಥಿತರಿದ್ದರು. ಕಾರ್ಯಕ್ರಮ 2025 ಜನವರಿ 19ರಿಂದ 24ರ ತನಕ ವಿವಿಧ ವೈಧಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಹಳ ವಿಜೃಂಭಣೆಯಿoದ ಜರಗಲಿದೆ.


Share with

Leave a Reply

Your email address will not be published. Required fields are marked *