ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ಮಾಣಿಯಲ್ಲಿ  ಬಂಟ್ವಾಳ  ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಬಾಲಕ -ಬಾಲಕಿಯರ ಕ್ರೀಡಾಕೂಟ 2024-25

Share with

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಬಂಟ್ವಾಳ, ಕಲ್ಲಡ್ಕ ವಲಯ ಕ್ರೀಡಾಕೂಟ ಸಮಿತಿ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ, ಇವುಗಳ ಸಂಯುಕ್ತ ಆಶ್ರಯದಲ್ಲಿ 14 ರಿಂದ 17 ವೈಯೋ ಮಿತಿಯೊಳಗಿನ ಬಾಲಕ -ಬಾಲಕಿಯರ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳ ಕ್ರೀಡಾಕೂಟ 2024 25 ಅಕ್ಟೋಬರ್ 28 ಮತ್ತು 29ರಂದು ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪೆರಾಜೆ ಮಾಣಿ ಇಲ್ಲಿ ಬೆಳಿಗ್ಗೆ ಗಂಟೆ 9:30 ರಿಂದ ನಡೆಯಲಿರುವುದು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ತಾಲೂಕು ತಹಶೀಲ್ದಾರಾದ ಶ್ರೀಮತಿ ಅರ್ಚನಾ ಡಿ ಭಟ್ ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಬಾಲವಿಕಾಸ ಟ್ರಸ್ಟ್ ಮಾಣಿಯ ಅಧ್ಯಕ್ಷರಾದ ಶ್ರೀ ಪ್ರಹ್ಲಾದ್ ಶೆಟ್ಟಿ ಜೆ ಮಾಡಲಿರುವರು.
ಮುಖ್ಯ ಅತಿಥಿಗಳಾಗಿ ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶ್ರೀ ಸಚಿನ್ ಕುಮಾರ್, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಮಂಜುನಾಥ ಎಮ್ ಜಿ, ಶ್ರೀ ಮಂಜುನಾಥ ಕೃಪ ಹೋಟೆಲ್ ಪ್ರೈ(ಲಿ ) ಮುಂಬೈನ ಶ್ರೀ ಮುಂಡಪ್ಪ ಎಸ್ ಪಯ್ಯಾಡೆ, ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಶ್ರೀ ಗೋಪಾಲ್ ಎಚ್ ಎ, ಲಯನ್ಸ್ ಕ್ಲಬ್ ಮಾಣಿ ಇದರ ಸ್ಥಾಪಕ ಅಧ್ಯಕ್ಷರಾದ ಶ್ರೀ ಗಂಗಾಧರ ರೈ ತುಂಗೇರಕೋಡಿ ಮೊದಲಾದವರು ಉಪಸ್ಥಿತರಿರುವರು.

  ಕ್ರೀಡಾಕೂಟಗಳು ನಿಗದಿತ   ಸಮಯಕ್ಕೆ ಸರಿಯಾಗಿ ನಡೆಯಲಿರುವುದರಿಂದ ಬಂಟ್ವಾಳ ತಾಲೂಕಿನ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಅರ್ಹತೆ ಪಡೆದ ವಿದ್ಯಾರ್ಥಿಗಳನ್ನು ಆಯಾ ಶಾಲಾ ಶಿಕ್ಷಕರು ಕ್ಲಪ್ತ ಸಮಯದಲ್ಲಿ  ಇರುವಂತೆ ನೋಡಿಕೊಂಡು ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕಾಗಿ ಕ್ರೀಡಾಕೂಟದ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Share with

Leave a Reply

Your email address will not be published. Required fields are marked *