ಮಂಗಲ್ಪಾಡಿ: ಪ್ರತಾಪನಗರ ಸಾರ್ವಜನಿಕ ಶ್ರೀ ಗೌರೀ ಗಣೇಶೋತ್ಸವದ ಅವಲೋಕನಾ ಸಭೆ ಭಾನುವಾರ ಸಂಜೆ ಗಣೇಶ ಮಂದಿರದಲ್ಲಿ ನಡೆಯಿತು.
ಸಮಿತಿಯ ಅಧ್ಯಕ್ಷ ದುಗ್ಗಪ್ಪ ಶೆಟ್ಟಿ ತಿಂಬರ ಅಧ್ಯಕ್ಷತೆ ವಹಿಸಿದರು. ಗೌರವಾಧ್ಯಕ್ಷ ಹರಿಶ್ಚಂದ್ರ ಆಚಾರ್ಯ ಬೇಕೂರು ಉಪಸ್ಥಿತರಿದ್ದರು. ಕೋಶಾಧಿಕಾರಿ ನಾರಾಯಣ ಮಣಿಯಾಣಿ ಪ್ರತಾಪನಗರ ಲೆಕ್ಕಪತ್ರ ಮಂಡಿಸಿದರು. ಪ್ರಧಾನ ಕಾರ್ಯದರ್ಶಿ ಲೀಲಾಧರ ಆಚಾರ್ಯ ಪ್ರತಾಪನಗರ ಸ್ವಾಗತಿಸಿ, ವಂದಿಸಿದರು. ಈ ವೇಳೆ ಸಮಿತಿಯ ಇತರ ಪದಾಧಿಕಾರಿಗಳು, ಕಾರ್ಯಕರ್ತರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಹಿತ ಮಾತೆಯರು ಭಾಗವಹಿಸಿದರು.