
ಕಾಸರಗೋಡು: ದೇವಸ್ಥಾನದ ಉತ್ಸವದ ವೇಳೆ ಪಟಾಕಿ ಸಿಡಿದು ನಡೆದ ಅವಘಡದಲ್ಲಿ ಸುಮಾರು 150 ಕ್ಕೂ ಮಂದಿ ಗಾಯಗೊಂಡು ಎಂಟು ಮಂದಿಯ ಸ್ಥಿತಿ ಗಂಭೀರವಾಗಿರುವ ಘಟನೆ ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಬಳಿಯ ದೇವಸ್ಥಾನದಲ್ಲಿ ಸೋಮವಾರ(ಅ.28) ತಡರಾತ್ರಿ ಸಂಭವಿಸಿದೆ.

ಸೋಮವಾರ ತಡರಾತ್ರಿ ಸುಮಾರು 12.30 ರ ವೇಳೆಗೆ ಅಂಜುತಂಬಲಂ ವೀರರ್ಕಾವು ದೇವಸ್ಥಾನದಲ್ಲಿ ವಾರ್ಷಿಕ ಕಲಿಯಾಟಂ ಉತ್ಸವ ನಡೆಯುತ್ತಿತ್ತು ಈ ವೇಳೆ ಪಟಾಕಿ ಸಿಡಿಸಲಾಗಿದೆ ಈ ಸಂದರ್ಭದಲ್ಲಿ ಪಟಾಕಿಯ ಕಿಡಿ ದೇವಸ್ಥಾನದ ಬಳಿ ಇರುವ ಪಟಾಕಿ ಗೋಡಾನ್ ಗೆ ತಗುಲಿ ಬೆಂಕಿ ತಗುಲಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಗಾಯಗೊಂಡವರನ್ನು ಕಾಸರಗೋಡು, ಕಣ್ಣೂರು, ಮಂಗಳೂರು ಸೇರಿದಂತೆ ವಿವಿದೆಡೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಇದರಲ್ಲಿ ಎಂಟು ಮಂದಿಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.




