ರೈಲಿನಲ್ಲಿ ಪ್ರಯಾಣಿಸುವಾಗ ಹೃದಯಾಘಾತ: ಗ್ರಾ. ಪಂ ಸದಸ್ಯ ಮೃತ್ಯು

Share with

ಉಳ್ಳಾಲ: ರೈಲಿನಲ್ಲಿ ಪ್ರಯಾಣಿಸುವಾಗ ಉಳ್ಳಾಲದ ಮುನ್ನುರು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಮಾ. 5ರಂದು ದಿಲ್ಲಿಯಿಂದ ಮಂಗಳೂರು ಕಡೆ ರೈಲಿನಲ್ಲಿ ವಾಪಸಾಗುತ್ತಿದ್ದಾಗ ನಡೆದಿದೆ.

ಹೃದಯಾಘಾತಕ್ಕೀಡಾಗಿ ಮುನ್ನೂರು ಗ್ರಾಮ ಪಂಚಾಯತ್‌ ಸದಸ್ಯ, ಕುತ್ತಾರು ಮದನಿನಗರ ನಿವಾಸಿ ಅಬ್ದುಲ್‌ ಅಝೀಝ್ ಆರ್‌.ಕೆ.ಸಿ. (42) ಮೃತಪಟ್ಟ ಘಟನೆ ಸಂಭವಿಸಿದೆ.

ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ಅಬ್ದುಲ್ ಅವರು ವ್ಯವಹಾರಗಳ ನಿಮಿತ್ತ ದೆಹಲಿಗೆ ತೆರಳಿದ್ದರು. ಮರಳುವಾಗ ಅಂಕೋಲಾ ಸಮೀಪ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಮುಂದಿನ ನಿಲ್ದಾಣ ಕುಮಟಾದಲ್ಲಿ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯುವ ಪ್ರಯತ್ನ ಮಾಡಲಾಯಿತಾದರೂ, ಅದಾಗಲೇ ಅಬ್ದುಲ್‌ ಅಝೀಝ್ ಮೃತಪಟ್ಟಿದ್ದರು. ಕಾಂಗ್ರೆಸ್‌ನ ಗ್ರಾಮ ಸಮಿತಿ ಅಧ್ಯಕ್ಷರಾಗಿದ್ದ ಅವರು ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದರು.l


Share with

Leave a Reply

Your email address will not be published. Required fields are marked *