
ಕಾಸರಗೋಡು: ಬೈಕ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ಏ.4ರ ರಾತ್ರಿ ಚೆಮ್ನಾಡ್ ನಲ್ಲಿ ನಡೆದಿದೆ.

ಮೇಲ್ಪರಂಬ ಒರವಂಗರದ ಮುಹಮ್ಮದ್ ಹನೀಫ್ (26) ಮೃತಪಟ್ಟವರು ಎಂದು ಗುರುತಿಸಲಾಗಿದೆ. ರಸ್ತೆಯ ಹೊಂಡಕ್ಕೆ ಬಿದ್ದ ಬೈಕ್ ಮೇಲೆ ಹಿಂದಿನಿಂದ ಬಂದ ಲಾರಿ ಹಾದು ಹೋಗಿದ್ದು,ಗಂಭೀರ ಗಾಯಗೊಂಡ ಹನೀಫ್ ರನ್ನು ಆಸ್ಪತ್ರೆಗೆ ತಲುಪಿಸಿದರೂ ಆಗಲೇ ಮೃತಪಟ್ಟಿದ್ದರು.
ಗಲ್ಫ್ ಉದ್ಯೋಗಿಯಾಗಿದ್ದ ಹನೀಫ್ ರಂಝಾನ್ ಹಬ್ಬದ ಹಿನ್ನಲೆ ಯಲ್ಲಿ ಊರಿಗೆ ಬಂದಿದ್ದರು. ಮುಂದಿನ ವಾರ ಮತ್ತೆ ಗಲ್ಫ್ ಗೆ ತೆರಳಬೇಕಿತ್ತು.




