
ಬೆಂಗಳೂರು, ಜೂನ್ 04: 18ನೇ ಆವೃತ್ತಿಯ ಐಪಿಎಲ್ (IPL) ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರರು ನಗರಕ್ಕೆ ಬಂದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡೆಯಲಿದೆ. ಈ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ಗೇಟ್- 6ರಲ್ಲಿ ಕಾಲ್ತುಳಿತ ಸಂಭವಿಸಿ ಓರ್ವ ಆರ್ಸಿಬಿ ಅಭಿಮಾನಿ ಮೃತಪಟ್ಟಿದ್ದನೆ.





