ಮಂಗಳೂರು :ಕರ್ನಾಟಕ ರಾಜ್ಯ ಮಹಾವಿದ್ಯಾಲಯಗಳ ಶಿಕ್ಷಕ ಸಂಘದ ವತಿಯಿಂದ ಕೊಡಮಾಡುವ ಅತ್ಯುತ್ತಮ ಸಂಶೋಧನಾ ಪ್ರಶಸ್ತಿಗೆ ಎ ಜೆ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ| ಶಾಂತಾರಾಮ ರೈ ಸಿ ಆಯ್ಕೆಯಾಗಿದ್ದಾರೆ.


ಜುಲೈ 24 ರಂದು ಪ್ರೇರಣಾ ದಿವಸ್ ಪ್ರಯುಕ್ತ, ಮೂಡಬಿದಿರೆ ಆಳ್ವಾಸ್ ಕಾಲೇಜಿನ ವಿ ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.




