ರೈತರಿಗೆ ಸಮರ್ಪಕ ಗೊಬ್ಬರ ವಿತರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು MP ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗದಗಿನ ಸೊರಟೂರಿನಲ್ಲಿ ಮಾತನಾಡಿ, ‘ರಾಜ್ಯದಲ್ಲಿ ರೈತರಿಗೆ ಗೊಬ್ಬರ ಕೊರತೆ ಎದುರಾಗಿದ್ದು, ಸರ್ಕಾರ ಮುಂಚಿತವಾಗಿ ಸ್ಟಾಕ್ ಮಾಡಬೇಕಿತ್ತು, ಮಾಡಿಲ್ಲ. ಹೆಚ್ಚಿನ ಗೊಬ್ಬರ ಬೇಕೆಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ಕೇಳಿದೆ. ಕೇಂದ್ರ ಕೃಷಿ ಸಚಿವರ ಜೊತೆ ಮಾತನಾಡಿ ಕೊಡಿಸುವ ಪ್ರಯತ್ನ ಮಾಡುತ್ತೇನೆ. ರಾಜ್ಯದಲ್ಲಿದ್ದ ಗೊಬ್ಬರವನ್ನು ರೈತರಿಗೆ ಸರ್ಕಾರ ಪೂರೈಕೆ ಮಾಡಲಿ ಎಂದಿದ್ದಾರೆ.




