ಕುಡಿತದ ಚಟ ಬಿಡಿಸಲು ನೀಡಿದ್ದ ಔಷಧಿ ಸೇವಿಸಿ ಇಬ್ಬರು ಮೃತಪಟ್ಟ ಘಟನೆ ಕಲಬುರಗಿಯ ಸೇಡಂ ತಾಲೂಕಿನ ಇಮಡಾಪುರದಲ್ಲಿ ನಡೆದಿದೆ. ಲಕ್ಷ್ಮೀ ನರಸಿಂಹಲು (45), ಗಣೇಶ್ ರಾಠೋಡ್ (30) ಮೃತ ದುರ್ದೈವಿಗಳು. ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಡಿತದ ಚಟ ಬಿಡಿಸುತ್ತೇನೆಂದು ಸಾಯಪ್ಪ ಮುತ್ಯಾ ಮೃತರ ಮೂಗಿನಲ್ಲಿ ಔಷಧಿ ಹಾಕಿದ್ದನು. ಈ ಔಷಧಿಯಿಂದ ಲಕ್ಷ್ಮೀ & ಗಣೇಶ ಮೃತಪಟ್ಟಿದ್ದಾರೆಂಬ ಆರೋಪ ಕೇಳಿಬಂದಿದೆ. ಸೇಡಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




