ಗೋಮಾಂಸ ಸಾಗಾಟಕ್ಕೆ ತಡೆ.. ನೈತಿಕ ಪೊಲೀಸ್ ಗಿರಿ ಆರೋಪ

Share with

ಮಂಗಳೂರು: ಯಾವುದೇ ದಾಖಲೆಗಳಿಲ್ಲದೆ ಬೈಕ್ ನಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ವ್ಯಕ್ತಿಯನ್ನು ಇಬ್ಬರು ತಡೆದು ನೈತಿಕ ಪೊಲೀಸ್‌ ಗಿರಿ ನಡೆಸಿದ ಘಟನೆ ಬಜ್ಜೆ ಪೊಲೀಸ್ ಠಾಣೆ ವ್ಯಾಪ್ತಿಯ ಮಳಲಿ ನಾರ್ಲಪದವು ಆರ್ರಸ್ತೆಯಲ್ಲಿ ಶನಿವಾರ ನಡೆದಿದೆ.

ಮುಲ್ಲರಪಟ್ಟ ಮೂಲದ ಅಬ್ದುಲ್ ಸತ್ತಾರ್ ಎಂಬಾತ ತನ್ನ 11 ವರ್ಷದ ಪುತ್ರಿಯೊಂದಿಗೆ ಸುಮಾರು 19 ಕೆಜಿ ಗೋಮಾಂಸವನ್ನು ಬೈಕ್ ನಲ್ಲಿ ಸಾಗಿಸುತ್ತಿದ್ದ. ಈ ವೇಳೆ ಯಡಪದವು ಮೂಲದ ಸುಮಿತ್ ಭಂಡಾರಿ( 21) ಮತ್ತು ರಜತ್ ನಾಯಕ್(30) ಎಂಬವರು ಟಾಟಾ ಸುಮೋದಲ್ಲಿ ಬಂದು ತಡೆದಿದ್ದಾರೆ. ಬೈಕ್ ಕೆಳಗೆ ಬಿದ್ದು, ಸೈಲೆನ್ಸ‌ರ್ ತಗುಲಿ ಬಾಲಕಿಯ ಕಾಲಿಗೆ ಸುಟ್ಟ ಗಾಯಗಳಾಗಿವೆ. ಸತ್ತಾರ್ ಬೈಕ್ ಬಿಟ್ಟು ಪರಾರಿಯಾಗಿದ್ದು, ಸ್ಥಳೀಯರು ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಸುಮಿತ್ ಮತ್ತು ರಜತ್ ಬೈಕ್ ತಡೆದು ನಿಲ್ಲಿಸಿದ್ದು ಕೆಳಗೆ ಬಿದ್ದಾಗ ಸೈಲೆನ್ಸರ್ ತಾಗಿ ಬಾಲಕಿಯ ಕಾಲಿಗೆ ಸುಟ್ಟ ಗಾಯಗಳಾಗಿವೆ.ಸತ್ತಾರ್ ಆ ಪ್ರದೇಶದಲ್ಲಿ ನಿಯಮಿತವಾಗಿ ಗೋಮಾಂಸವನ್ನು ತಲುಪಿಸುತ್ತಿದ್ದ ಎನ್ನಲಾಗಿದ್ದು, 35 ಪ್ಯಾಕೆಟ್‌ಗಳಲ್ಲಿ 19 ಕೆಜಿಗಳಷ್ಟು ಗೋಮಾಂಸ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇಬ್ಬರ ಮೇಲೆ ಹಲ್ಲೆ ನಡೆದಿದೆಯೇ ಎಂಬುದನ್ನು ಇನ್ನಷ್ಟೇ ದೃಢೀಕರಿಸಬೇಕಾಗಿದೆ.

ಯಾವುದೇ ಬಿಲ್ ಇಲ್ಲದೆ ಅಕ್ರಮವಾಗಿ ಗೋಮಾಂಸ ಸಾಗಣೆ ಮಾಡಿದ್ದಕ್ಕಾಗಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದೆ. ನೈತಿಕ ಪೊಲೀಸ್ ಗಿರಿ ಮಾಡಿರುವುದಕ್ಕಾಗಿ ಸುಮಿತ್ ಮತ್ತು ರಜತ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಮಿತ್ ಮತ್ತು ರಜತ್ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದೆ. ಇಬ್ಬರನ್ನೂ ಪ್ರತ್ಯೇಕವಾಗಿ ವಿಚಾರಿಸಲಾಗಿದೆ. ಗಾಯಗೊಂಡ ಬಾಲಕಿಯ ಹೇಳಿಕೆಯನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಇಬ್ಬರು ನಮ್ಮನ್ನು ತಡೆದು ತಂದೆಗೆ ಹೊಡೆದಿದ್ದಾರೆಂದು ಹೇಳಿಕೆ ನೀಡಿದ್ದಾಳೆ. ಸತ್ತಾರ್ ನನ್ನ ವಶಕ್ಕೆ ಪಡೆದ ನಂತರ ಆತ ಅದನ್ನು ಎಲ್ಲಿಂದ ಮಾಂಸ ತರುತ್ತಿದ್ದನೆಂದು ತಿಳಿಯಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *