ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ವಾಚರ್ ಸಾವನ್ನಪ್ಪಿದ್ದಾನೆ. ಚಾಮರಾಜ ನಗರದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಘಟನೆ ನಡೆದಿದೆ. ಸಣ್ಣಹೈದ ಹುಲಿ ದಾಳಿಗೆ ಬಲಿಯಾದ ಅರಣ್ಯ ಇಲಾಖೆಯ ವಾಚರ್. ಬಂಡೀಪುರದ ಮರಳಳ್ಳ ಕ್ಯಾಂಪ್ ಸಮೀಪ ಅವರು ಗಸ್ತಿಗೆ ಹೋಗಿದ್ದರು.

ಈ ವೇಳೆ ಹುಲಿ ದಾಳಿ ನಡೆಸಿ ಅವರನ್ನು ಬಲಿ ಪಡೆದಿದೆ. ಸಣ್ಣಹೈದ ಅವರು ಕಳೆದ 8 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ವಾಚರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದ್ದಾರೆ.




