ಸಂಸದರ ಕಾರಿಗೆ ಬೊಲೆರೋ ಡಿಕ್ಕಿ; ಅದೃಷ್ಟವಶಾತ್ ಸಂಸದರು ಪಾರು

Share with

ಶಿವಮೊಗ್ಗ: ಸಂಸದ ಬಿ.ವೈ. ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಕುಂಚೇನಹಳ್ಳಿ ಗ್ರಾಮದ ಬಳಿ ನಡೆದಿದೆ.

ಸಂಸದರು ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.

ಕುಂಚೇನಹಳ್ಳಿ ಗ್ರಾಮದ ಸಮೀಪ ಸಂಸದರ ಕಾರು ಚಲಿಸುತ್ತಿದ್ದಾಗ ಹಿಂದಿನಿಂದ ಬಂದ ಬೊಲೇರೊ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರುಗಳಿಗೆ ಹಾನಿಯಾಗಿದೆ. ಸಂಸದ ರಾಘವೇಂದ್ರ ಸೇರಿದಂತೆ ಕಾರಿನಲ್ಲಿದ್ದ ಸಂಸದರ ಕಚೇರಿ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.

ಎಸ್ಕಾರ್ಟ್ ವಾಹನದಲ್ಲೇ ವಿಮಾನ ನಿಲ್ದಾಣದವರೆಗೂ ಪ್ರಯಾಣ ಬೆಳೆಸಿದರು.


Share with

Leave a Reply

Your email address will not be published. Required fields are marked *