ಕುಂಬಳೆಯಲ್ಲಿ ಟೋಲ್ ಸಂಗ್ರಹ: ಕರ್ನಾಟಕ ರಾಜ್ಯ ಸಾರಿಗೆ ಬಸ್ ನಲ್ಲಿ ಟಿಕೆಟ್ ದರ ಹೆಚ್ಚಳ

Share with

ಕುಂಬಳೆ: ಆರಿಕ್ಕಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಆರಂಭಗೊಳ್ಳುವುದರೊಂದಿಗೆ ಮಂಗಳೂರಿಗೆ ತೆರಳುವ ಪ್ರಯಾಣಿಕರು ಇನ್ನಷ್ಟು ಮೊತ್ತವನ್ನು ಇದಕ್ಕಾಗಿ ವ್ಯಯಿಸಬೇಕಾಗಿದೆ. ಕರ್ನಾಟಕ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಇದೀಗ ಪ್ರಯಾಣ ದರ ಹೆಚ್ಚಿಸಲಾಗಿದೆ. ಕಳೆದ ದಿನದಿಂದ ಹೆಚ್ಚಿಸಿದ ದರ ವಸೂಲಿ ಮಾಡಲಾಗುತ್ತಿದೆ. ಯಾವುದೇ ಮುನ್ಸೂಚನೆ ನೀಡದೆ ಪ್ರಯಾಣದರ ಹೆಚ್ಚಿಸಿರುವುದಾಗಿಯೂ ಇದು ಪ್ರಯಾಣಿಕರಿಗೆ ಭಾರೀ ಹೊರೆಯಾಗಿದೆಯೆಂದು ದೂರಲಾಗಿದೆ.

ಕುಂಬಳೆಯಿಂದ ಉಪ್ಪಳಕ್ಕೆ 18 ರೂಪಾಯಿದ್ದು ಈಗ 25 ರೂಪಾಯಿಯಾಗಿ ಹೆಚ್ಚಳಗೊಂಡಿದೆ. ಕುಂಬಳೆಯಿಂದ ಮಂಗಳೂರಿಗೆ 67 ರೂಪಾಯಿ ಇದ್ದು ಇದೀಗ 75 ರೂಪಾಯಿಗೇರಿದೆ.

ಕಾಸರಗೋಡಿನಿಂದ ಮಂಗಳೂರಿಗೆ 88 ರೂಪಾಯಿ ಇದ್ದು ಇದೀಗ 95 ರೂಪಾಯಿಗೇರಿದೆ. ಇದೇ ವೇಳೆ ಕುಂಬಳೆಯಿಂದ ಮಂಗಳೂರಿಗೆ ರಾಜಹಂಸ ಬಸ್‌ನಲ್ಲಿ ಈ ಹಿಂದೆ 80 ರೂಪಾಯಿ ಇದ್ದ ಟಿಕೆಟ್ ದರ ಇದೀಗ 90 ರೂಪಾಯಿಯಾಗಿ ಹೆಚ್ಚಳಗೊಂಡಿದೆ. ಟೋಲ್ ಸಂಗ್ರಹದ ಬೆನ್ನಲ್ಲೇ ಕರ್ನಾಟಕ ಸಾರಿಗೆ ಬಸ್‌ನಲ್ಲಿ ಪ್ರಯಾಣ ದರ ಹೆಚ್ಚಿಸಲಾಗಿದೆ. ಇದು ಕೆಎಸ್‌ ಆರ್‌ಟಿಸಿ ಬಸ್‌ಗಳನ್ನೇ ಆಶ್ರಯಿಸುವವರಿಗೆ ಭಾರೀ ಹೊಡೆತ ನೀಡಿದೆ. ಇದೇ ವೇಳೆ ಕೇರಳ ಎಸ್‌ಆರ್‌ಟಿಸಿ ದರ ಈಗ ಹೆಚ್ಚಿಸಿಲ್ಲ. ಶೀಘ್ರದಲ್ಲೇ ದರ ಹೆಚ್ಚಿಸಲಾಗುವುದೆಂಬ ಸೂಚನೆಯು ಅಧಿಕಾರಿಗಳ ಭಾಗದಿಂದ ಉಂಟಾಗಿದೆ.


Share with

Leave a Reply

Your email address will not be published. Required fields are marked *