ಬಿಸಿಲಿನಿಂದ ತತ್ತರಿಸಿರುವ ಜನರಿಗೆ ಮಳೆ ತಂಪೆರೆಯಲಿದೆ. ಹೌದು, ಬಂಗಾಳಕೊಲ್ಲಿ ಕಡೆಯಿಂದ ಬೀಸುತ್ತಿರುವ ಗಾಳಿ ಪ್ರಭಲವಾಗುತ್ತಿದ್ದು, ಮುಂದಿನ 7 ದಿನಗಳಲ್ಲಿ ರಾಜ್ಯದ ನಾಲ್ಕೂ ವಲಯಗಳಲ್ಲಿ (ಕರಾವಳಿ, ಮಲೆನಾಡು, ಉತ್ತರ ಮತ್ತು ದಕ್ಷಿಣ ಒಳನಾಡು) ಗುಡುಗು ಸಹಿತ ಮಳೆ ಆರಂಭವಾಗುವ ಸ್ಪಷ್ಟ ಲಕ್ಷಣಗಳು ಗೋಚರಿಸುತ್ತಿವೆ.

ಇನ್ನು ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಳವಾಗಿದ್ದರೇ, ದಕ್ಷಿಣ ಕನ್ನಡದಲ್ಲಿ ಕೆಲ ದಿಗಳಿಂದ ಬೆಳಗ್ಗೆ ಮಂಜು ಮುಸುಕಿದ ವಾತಾವರಣ ಇದೆ.




