ದೇಶದ ಐದು ರಾಜ್ಯಗಳಲ್ಲಿ ಭೂಕಂಪ..!

Share with

ಈಶಾನ್ಯದ ಮಣಿಪುರ, ನಾಗಾಲ್ಯಾಂಡ್, ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶಗಳಲ್ಲಿ ಇಂದು ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 5.2 ರಷ್ಟಿತ್ತು. ಭೂಕಂಪದ ಕೇಂದ್ರಬಿಂದು ಮಣಿಪುರದ ಕಾಲ್ಟಾಂಗ್‌ನಲ್ಲಿ, ಮೇಲ್ಮಯಿಂದ 62 ಕಿಲೋಮೀಟರ್ ಆಳದಲ್ಲಿದೆ.

ಇಂದು ಬೆಳಿಗ್ಗೆ 5:59 ಕ್ಕೆ ಭೂಕಂಪ ಸಂಭವಿಸಿದೆ. ಅದೃಷ್ಟವಶಾತ್, ಭೂಕಂಪದಿಂದ ಯಾವುದೇ ಜೀವ ಹಾನಿ ಅಥವಾ ಆಸ್ತಿ ನಷ್ಟ ಸಂಭವಿಸಿಲ್ಲ. ಆದರೆ ಜನರು ಭಯಭೀತರಾಗಿ ತಮ್ಮ ಮನೆಗಳಿಂದ ಹೊರಗೆ ಓಡಿರುವುದಾಗಿ ವರದಿಯಾಗಿದೆ.


Share with

Leave a Reply

Your email address will not be published. Required fields are marked *