ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಸಮಾರಂಭ ಆರಂಭ

Share with

ಹೊಸ ಕಾಂಗ್ರೆಸ್ ಸರ್ಕಾರದ ಪ್ರಮಾಣವಚನ ಸಮಾರಂಭ ಆರಂಭವಾಗಿದ್ದು, ಸಂಜೆ 4.05 ಕ್ಕೆ ನಿಗದಿಯಾಗಿರುವ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಮ ಧ್ಯಾಹ್ನ 3.59 ಕ್ಕೆ ವೇದಿಕೆಗೆ ಆಗಮಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ರಣದೀಪ್ ಸುರ್ಜೇವಾಲ ಮತ್ತು ಕೆಸಿ ವೇಣುಗೋಪಾಲ್‌ ಸೇರಿದಂತೆ ವೇದಿಕೆಯ ಮೇಲಿದ್ದ ನಾಯಕರು ಮತ್ತು ಗಣ್ಯರನ್ನು ರಾಜ್ಯಪಾಲರು ಸ್ವಾಗತಿಸಿದರು.

ವಂದೇ ಮಾತರಂನ ಪೂರ್ಣ ಪಠಣದೊಂದಿಗೆ ಸಮಾರಂಭವು ಪ್ರಾರಂಭವಾಯಿತು, ನಂತರ ನಿಗದಿತ ಕಾರ್ಯಕ್ರಮದ ಪ್ರಕಾರ ರಾಷ್ಟ್ರಗೀತೆ ಮತ್ತು ರಾಜ್ಯ ಗೀತೆ ಜಯ ಭಾರತ ಜನನಿಯ ತನುಜಾತೆಯೊಂದಿಗೆ ಪ್ರಾರಂಭವಾಯಿತು.

ಲೋಕ ಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಅವರ ಪತ್ನಿ ಹಾಗೂ ರಾಜ್ಯಸಭಾ ಸಂಸದೆ ಸುಧಾ ಮೂರ್ತಿ, ಮಾಜಿ ಕ್ರಿಕೆಟಿಗ ಅನಿಲ್‌ ಕುಂಬ್ಳೆ ನಟರಾದ ಜಯಮಾಲಾ ಮತ್ತು ಶಿವರಾಜ್‌ಕುಮಾರ್ ಸೇರಿದಂತೆ ವಿವಿಧ ವಿದೇಶಿ ದೂತಾವಾಸಗಳ ಮುಖ್ಯಸ್ಥರು ಭಾಗವಹಿಸಿದ್ದಾರೆ.


Share with

Leave a Reply

Your email address will not be published. Required fields are marked *