ಬಂಟ್ವಾಳ: ನೀರಪಾದೆಯ ಬಾಳ್ತಿಲದಲ್ಲಿ ಜೀರ್ಣೋದ್ಧಾರಗೊಳ್ಳಲಿರುವ ಬ್ರಹ್ಮಶ್ರೀ ನಾರಾಯಣಗುರು ಮಂದಿರ ನಿರ್ಮಾಣದ ವಿಜ್ಞಾಪನಾ ಪತ್ರವನ್ನು ಸಾರ್ವಜನಿಕ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ನಡೆದ ಗಣೇಶೋತ್ಸವ ಸಂದರ್ಭದಲ್ಲಿ ಸಮಿತಿ ಗೌರವಾಧ್ಯಕ್ಷರಾದ ಡಾ| ಪ್ರಭಾಕರ ಭಟ್ ಕಲ್ಲಡ್ಕ ಅವರು ಬಿಡುಗಡೆಗೊಳಿಸಿದರು.
ಟ್ರಸ್ಟ್ ಹಾಗೂ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ನಾರಾಯಣ ಪೂಜಾರಿ, ಟ್ರಸ್ಟಿನ ಕಾರ್ಯದರ್ಶಿ ಪಿ.ಎಸ್ ಮೋಹನ್, ಮಾಜಿ ಶಾಸಕರಾದ ಕೆ. ಪದ್ಮನಾಭ ಕೊಟ್ಟಾರಿ, ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಶಿವರಾಜ್ ಕಾಂದಿಲ ಹಾಗೂ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.