ಚೂರಿ ಇರಿತ: ವ್ಯಕ್ತಿ ಸಾವು

Share with

ರಾಘವೇಂದ್ರ ಶೇರಿಗಾರ್(42) ಅವರು ಸಾವನ್ನಪ್ಪಿದ್ದಾರೆ.

ಕುಂದಾಪುರ: ಭಾನುವಾರ ರಾತ್ರಿ ಕುಂದಾಪುರದಲ್ಲಿ ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಖಾರ್ವಿಕೇರಿ ನಿವಾಸಿ ಬನ್ಸ್ ರಾಘು ಅಲಿಯಾಸ್ ರಾಘವೇಂದ್ರ ಶೇರಿಗಾರ್(42) ಅವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ ಸಂಜೆ ಸುಮಾರು 7 ಗಂಟೆಗೆ ರಾಘವೇಂದ್ರ ಅವರು ಕಾರಿನಲ್ಲಿ ಕುಂದಾಪುರದ ಚಿಕ್ಕನ್ ಸಾಲ್ ರಸ್ತೆಯ ಅಂಚೆ ಕಚೇರಿ ಸಮೀಪ ಇರುವ ನ್ಯೂ ಡೆಲ್ಲಿ ಬಜಾರ್ ಅಂಗಡಿ ಬಳಿ ಹೋಗುತ್ತಿರುವಾಗ ವ್ಯಾಗನರ್ ಕಾರಿನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ತಗಾದೆ ತೆಗೆದು ಚೂರಿಯಿಂದ ರಾಘವೇಂದ್ರ ಅವರ ತೊಡೆಗೆ ಇರಿದು ಪರಾರಿಯಾಗಿದ್ದ. ಗಂಭೀರವಾಗಿ ಗಾಯಗೊಂಡಿದ್ದ ರಾಘು ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಘವೇಂದ್ರ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *