ಕಡಬ ಮೂಲದ ಯುವಕ ರೈಲಿನಿಂದ ಆಯತಪ್ಪಿ ಬಿದ್ದು ಸಾವು!

Share with

ಮೃತ ಯುವಕನನ್ನು ಕಡಬ ತಾಲೂಕಿನ ಮರ್ದಾಳ ಬಂಟ್ರ ಗ್ರಾಮದ ನೀರಾಜೆ ನಿವಾಸಿ ಸುರೇಶ್ ಎಂದು ಗುರುತಿಸಲಾಗಿದೆ.

ಕಡಬ: ಕಡಬದ ಯುವಕನೊಬ್ಬ ರೈಲಿನಿಂದ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಕೇರಳದ‌ ಕಣ್ಣೂರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಮೃತ ಯುವಕನನ್ನು ಕಡಬ ತಾಲೂಕಿನ ಮರ್ದಾಳ ಬಂಟ್ರ ಗ್ರಾಮದ ನೀರಾಜೆ ನಿವಾಸಿ ಸುರೇಶ್ ಎಂದು ಗುರುತಿಸಲಾಗಿದೆ.

ನೀರಾಜೆಯ ಸುರೇಶ್ ಕೇರಳದಲ್ಲಿ ಟಿಂಬರ್ ಕೆಲಸ ಮಾಡುತ್ತಿದ್ದು, ಗುರುವಾರ ರಾತ್ರಿ ಮನೆಮಂದಿಗೆ ಕರೆ ಮಾಡಿ ರೈಲಿನಲ್ಲಿ ಊರಿಗೆ ಬರುತ್ತಿರುವ ವಿಚಾರ ತಿಳಿಸಿದ್ದರು.

ಈ ಹಿನ್ನಲೆಯಲ್ಲಿ ಇಂದು ಮುಂಜಾನೆ 8 ಗಂಟೆ ಸುಮಾರಿಗೆ ಅವರ ಮನೆಯವರು ಮೊಬೈಲ್ ನಂಬರ್ ಕರೆ ಮಾಡಿದರೆ ಆಸ್ಪತ್ರೆಯ ಸಿಬ್ಬಂದಿ ಪೋನ್ ಕರೆ ಸ್ವೀಕರಿಸಿ ಸುರೇಶ್ ಮೃತಪಟ್ಟಿರುವ ವಿಚಾರ ತಿಳಿಸಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮನೆ ಮಂದಿ ಕಣ್ಣೂರಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *