ಬಂಟ್ವಾಳ: ಬುಡೋಳಿ ಜಂಕ್ಷನ್ ನಲ್ಲಿ ಆದಿತ್ಯವಾರ ಸಂಜೆ ವೇಳೆ ತೆಂಗಿನ ಮರವೊಂದಕ್ಕೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ಸಂಭವಿಸಿದೆ.
ಬುಡೋಳಿ ಫಾತಿಮಾ ಸ್ಟೋರ್ ಮಾಲಕ ಸಿದ್ದೀಕ್ ಅವರ ಮನೆಯಂಗಳದಲ್ಲಿ ಇರುವ ತೆಂಗಿನ ಮರಕ್ಕೆ ಸಿಡಿಲು ಬಡಿದ ಪರಿಣಾಮವಾಗಿ ತೆಂಗಿನ ಮರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದಲ್ಲದೆ, ಮರ ಸುಟ್ಟು ಹೋಗಿದೆ ಎಂದು ತಿಳಿದು ಬಂದಿದೆ. ಇದರ ಪಕ್ಕದಲ್ಲಿ ಇವರಿಗೆ ಸೇರಿದ ಅಂಗಡಿ ಇದೆಯಾದರೂ ಯಾವುದೇ ಅವಘಡ ಸಂಭವಿಸಿಲ್ಲ.