ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಸಿಡಿಲು ಬಡಿದು ಯುವಕ ಮೃತ್ಯು

Share with

ಉಡುಪಿ: ಯುವಕನೋರ್ವ ಮೊಬೈಲ್‌ ಪೋನ್‌ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟ ಘಟನೆ ಕೋಟ ಆವರ್ಸೆ ಸಮೀಪ ಕಿರಾಡಿಯಲ್ಲಿ ಅ.29ರಂದು ರಾತ್ರಿ ಸಂಭವಿಸಿದೆ ಎಂದು ವರದಿಯಾಗಿದೆ.

ಪ್ರಮೋದ್‌ ಶೆಟ್ಟಿ (24) ಮೃತ ಯುವಕ.

ಸ್ಥಳೀಯ ಕಿರಾಡಿ ಹಂಚಿನಮನೆ ನಿವಾಸಿಯಾದ ಬಾಬಣ್ಣ ಶೆಟ್ಟಿ ಹಾಗೂ ಬೇಬಿಯವರ ಪುತ್ರ ಪ್ರಮೋದ್‌ ಶೆಟ್ಟಿ (24) ಮೃತ ಯುವಕ ಎಂದು ಗುರುತಿಸಲಾಗಿದೆ.

ಈತ ಮೊಬೈಲ್‌ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಗಂಭೀರವಾಗಿ ಗಾಯಗೊಂಡಿದ್ದು, ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಈತ ಬ್ರಹ್ಮಾವರದ ಬಟ್ಟೆ ಆಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದು ತಂದೆ, ತಾಯಿ, ಇಬ್ಬರು ಸಹೋದರರನ್ನು ಅಗಲಿದ್ದಾನೆ.


Share with

Leave a Reply

Your email address will not be published. Required fields are marked *