ಪಡುಬಿದ್ರೆ: ಟ್ಯಾಂಕರ್ ಹರಿದು ಬೈಕ್ ಸವಾರ ಸಾವು

Share with

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರೆ ಪೇಟೆಯ ಬಸ್ ನಿಲ್ದಾಣದ ಬಳಿ ಟ್ಯಾಂಕರ್ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಕಂಚಿನಡ್ಕ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ.

ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಶುಕ್ರವಾರ ಸಂಜೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರೆ ಪೇಟೆಯ ಬಸ್ ನಿಲ್ದಾಣದ ಬಳಿ ಖಾಸಗಿ ಬಸ್ಸೊಂದು ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿದ ವೇಳೆ ಹಿಂದಿನಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪ್ರಜ್ವಲ್ ರಸ್ತೆಗೆ ಎಸೆಯಲ್ಪಟ್ಟಿದ್ದರು. ಈ ವೇಳೆ ಟ್ಯಾಂಕರ್ ಅವರ ಮೇಲೆ ಹರಿದ ಪರಿಣಾಮ ಪ್ರಜ್ವಲ್ ಸ್ಥಳದಲ್ಲೇ ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *