ಮಕ್ಕಳ ಕಲಾ ಲೋಕದಿಂದ ರಾಜೇಶ ವಿಟ್ಲರವರಿಗೆ “ಬಾಲಬಂಧು” ಪುರಸ್ಕಾರ

Share with

ಮಕ್ಕಳ ಕಲಾಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕವು ಮಕ್ಕಳಿಗಾಗಿ ಕಲೆ ಸಾಹಿತ್ಯ ಚಟುವಟಿಕೆಗಳಲ್ಲಿ ತನ್ನನ್ನು ವಿಪುಲವಾಗಿ ತೊಡಗಿಸಿಕೊಂಡಿರುವವರಿಗೆ ಪ್ರತಿ ವರ್ಷ ನೀಡುವ ತಾಲೂಕು ಮಟ್ಟದ ಬಾಲಬಂಧು ಪುರಸ್ಕಾರಕ್ಕೆ ಬಾರಿ ರಾಜೇಶ ವಿಟ್ಲ ಆಯ್ಕೆಯಾಗಿದ್ದಾರೆ. ವಿಟ್ಲದ ಆರ್.ಕೆ. ಕಲಾ ಸಂಸ್ಥೆಯ ಸಹಪ್ರವರ್ತಕರಾಗಿರುವ ರಾಜೇಶ್ ವಿಟ್ಲ ತನ್ನ ಕಲಾ ವೃತ್ತಿ ಬದುಕಿನೊಂದಿಗೆ ಮಕ್ಕಳಿಗಾಗಿ ಬಂಟ್ವಾಳ ತಾಲೂಕಿನ ವಿವಿಧ ಶಾಲೆಗಳಲ್ಲಿ ರಜಾ ಶಿಬಿರಗಳನ್ನು ಸಂಘಟಿಸಿ, ಮಕ್ಕಳಲ್ಲಿ ಕಲೆ ಸಾಹಿತ್ಯವನ್ನು ಚಿಗುರಿಸುವ ಸೇವಾ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂಬುದನ್ನು ಗುರುತಿಸಿ ಬಾಲಬಂಧು ಪುರಸ್ಕಾರಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ.

ರಾಜೇಶ ವಿಟ್ಲ ರವರಿಗೆ “ಬಾಲಬಂಧು” ಪುರಸ್ಕಾರ.


ಕಡೇಶಿವಾಲಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನೇತೃತ್ವದಲ್ಲಿ ದಿನಾಂಕ 06-12-2023 ರಂದು ಜರಗಲಿರುವ 17ನೇ ವರ್ಷದ ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ, ಸಮಾರೋಪ ಸಮಾರಂಭದಲ್ಲಿ ರಾಜೇಶ ವಿಟ್ಲ ಅವರನ್ನು ಸನ್ಮಾನಿಸಿ, ಬಂಟ್ವಾಳ ತಾಲೂಕು ಮಟ್ಟದ ಬಾಲಬಂಧು ಪುರಸ್ಕಾರವನ್ನುಪ್ರದಾನ ಮಾಡಲಾಗುವುದು ಎಂದು ಮಕ್ಕಳ ಕಲಾ ಲೋಕದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ತಿಳಿಸಿರುತ್ತಾರೆ.


Share with

Leave a Reply

Your email address will not be published. Required fields are marked *