ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಆಡುತ್ತಿದ್ದ 7 ಮಂದಿಯನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಗಳು 62 ನೇ ತೋಕೂರು ಗ್ರಾಮದ ತೋಕೂರು ರೈಲು ನಿಲ್ದಾಣದ ಬಳಿ ಕಾಡುಪೊದೆಗಳ ನಡುವೆ ಅಂದರ್ ಬಾಹರ್ ಜೂಜಾಡುತ್ತಿದ್ದರು ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ರಾಜಾಸಾಬ್ ನದಾಫ್, ಕಂಠೇಶ್ ಬಿ.ಮೇಲಿನ ಮನಿ, ತಿಮ್ಮಣ್ಣ ವಡ್ಡರ್, ಕಲ್ಲಪ್ಪ ಶರಪ್ಪ, ಶಿವಾನಂದ, ವೀರೇಶ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 5,220 ರೂಪಾಯಿ ನಗದು ಸಹಿತ ಇತರ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.