ಬ್ಯಾಂಕ್ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ಸೌದಿಯುಲ್ಲಿ ಬಂಧಿಯಾಗಿದ್ದ ಕಡಬದ ಯುವಕ ಸ್ವದೇಶಕ್ಕೆ

Share with

ಮಂಗಳೂರು: ಬ್ಯಾಂಕ್ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ 11 ತಿಂಗಳಿನಿಂದ ಬಂಧಿಯಾಗಿದ್ದ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್ ಅವರು ಕೊನೆಗೂ ಬಂಧಮುಕ್ತವಾಗಿದ್ದು, ಸೋಮವಾರ ರಾತ್ರಿ (ನ.20) ಸ್ವದೇಶಕ್ಕೆ ಆಗಮಿಸಿದ್ದಾರೆ.

ಚಂದ್ರಶೇಖರ್ ಅವರು ಕೊನೆಗೂ ಬಂಧಮುಕ್ತವಾಗಿದ್ದು, ಸೋಮವಾರ ರಾತ್ರಿ (ನ.20) ಸ್ವದೇಶಕ್ಕೆ ಆಗಮಿಸಿದ್ದಾರೆ.

ರಿಯಾದ್‌ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್ ಅವರನ್ನು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಟ್ಟಿದ್ದು, ಅಲ್ಲಿಂದ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಲೇ ಅವರು ಭಾವುಕರಾಗಿದ್ದಾರೆ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *