ಮಂಗಳೂರು: ಯಕ್ಷಗುರು, ನಿವೃತ್ತ ಅಧ್ಯಾಪಕ ಕೈರಂಗಳ ನಾರಾಯಣ ಹೊಳ್ಳ ವಿಧಿವಶ

Share with

ಮಂಗಳೂರು: ಯಕ್ಷಗುರು, ಸಂಘಟಕ, ಕಲಾವಿದ, ಅಧ್ಯಾಪಕ, ವೈದ್ಯ ಕೈರಂಗಳ ನಾರಾಯಣ ಹೊಳ್ಳ ಅವರು ನ.20ರಂದು ವಿಧಿವಶರಾಗಿದ್ದಾರೆ. ಮೂಲತಃ ಕಾಸರಗೋಡು ಜಿಲ್ಲೆಯ ಕೋಳ್ಯೂರಿನವರಾದ ನಾರಾಯಣ ಹೊಳ್ಳ ಅವರು ಮುಂದೆ ಕೈರಂಗಳ ನಾರಾಯಣ ಹೊಳ್ಳ ಎಂದೇ ಪ್ರಸಿದ್ಧಿಯನ್ನು ಹೊಂದಿದ್ದರು.

ಯಕ್ಷಗುರು, ಸಂಘಟಕ, ಕಲಾವಿದ, ಅಧ್ಯಾಪಕ, ವೈದ್ಯ ಕೈರಂಗಳ ನಾರಾಯಣ ಹೊಳ್ಳ.

ಕೈರಂಗಳ ಶಾಲೆಯಲ್ಲಿ ಅಧ್ಯಾಪಕರಾಗಿದ್ದ ನಾರಾಯಣ ಹೊಳ್ಳರು, ಹೋಮಿಯೋಪತಿ ಚಿಕಿತ್ಸಾ ಪದ್ಧತಿಯನ್ನು ಖಾಸಗಿಯಾಗಿ ಚಿಕಿತ್ಸೆ ನೀಡುತ್ತಿದ್ದ ವೈದ್ಯರಾಗಿಯೂ ಗುರುತಿಸಿಕೊಂಡಿದ್ದಾರೆ. ಇನ್ನು ಯಕ್ಷಗಾನದ ವೇಷಭೂಷಣಗಳ ನಿರ್ವಹಣೆ, ಹವ್ಯಾಸಿ ಕಲಾವಿದರಿಗೆ ಬಣ್ಣ ಹಚ್ಚುವ ಪ್ರಸಾಧನದ ಕೆಲಸದಲ್ಲಿಯೂ ಇವರು ಪರಿಣತಿ ಪಡೆದಿದ್ದರು. ಇವರು ಹಲವಾರು ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ, ಯಕ್ಷ ಶಿಕ್ಷಣ ನೀಡಿ, ಕಲಿಸಿ ಬೆಳೆಸಿದ ಗುರುಗಳಾಗಿದ್ದಾರೆ.


Share with

Leave a Reply

Your email address will not be published. Required fields are marked *